ಚಾಮರಾಜನಗರ

ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 1.76 ಕೋಟಿ ಸಂಗ್ರಹ

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ( ಆಗಸ್ಟ್‌ 29 ) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 4:30 ಗಂಟೆಯವರೆಗೂ ನಡೆಯಿತು.

ಭೀಮನ ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 1,76,29,849 ನಗದು, 45 ಗ್ರಾಂ ಚಿನ್ನ ಹಾಗೂ 1.300 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ ಹುಂಡಿಯಿಂದ 2,96,469 ರೂ, ಯುಎಸ್ 20 ಡಾಲರ್, ಥಾಯ್ಲ್ಯಾಂಡ್ 1, ಶ್ರೀಲಂಕಾ 2, ಅರಬ್‌ನ 3 ನೋಟು ಸೇರಿದಂತೆ ಇತರ ದೇಶಗಳ ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 11 ನೋಟುಗಳನ್ನು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಭಾರತಿ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

14 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

58 mins ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

1 hour ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

1 hour ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೈಸೂರು: ಹಸಿರು ಕ್ರಾಂತಿ ಹರಿಕಾರ ಬಾಬುಜಗಜೀವನ್ ರಾಮ್ 119ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್‌ ರಾಮ್‌ ಅವರ 119ನೇ ಜಯಂತಿಯನ್ನು ಆಚರಣೆ…

2 hours ago