Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಇನ್ಮುಂದೆ ಬಂಡೀಪುರ ಸಫಾರಿಯಲ್ಲಿ 1 ಟ್ರಿಪ್‌ ಕಡಿತ ; ಅರಣ್ಯ ಇಲಾಖೆ ಮಹತ್ವದ ಆದೇಶ

ಎಚ್‌.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಸಫಾರಿಯಲ್ಲಿ ಕೊನೆಯ 1 ಟ್ರಿಪ್ ಅನ್ನು ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:-ಎಸ್‌ಸಿ ಒಳ ಮೀಸಲಾತಿ ಸಂಬಂಧ ಮಹತ್ವದ ನಿರ್ಧಾರ : ಇಲ್ಲಿವೆ ಸಭೆಯ ಮುಖ್ಯಾಂಶಗಳು

ಆದೇಶದಲ್ಲಿ ಏನಿದೆ?
ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6 ಗಂಟೆ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ಧದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿದ್ದಲ್ಲದೇ ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಅ.28ರಿಂದಲೇ ಹಾಲಿ ಇರುವ ಸಫಾರಿಯ ಟ್ರಿಪ್​ಗಳ ಪೈಕಿ 1 ಟ್ರಿಪ್ ಅನ್ನು ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Tags:
error: Content is protected !!