ಎಚ್.ಡಿ ಕೋಟೆ : ಹೆಚ್ಚುತ್ತಿರುವ ಮಾನವ ಮತ್ತು ವನ್ಯಜೀವಿ ಸಂಘರ್ಷ ಹಿನ್ನೆಲೆ ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿಯ ಟ್ರಿಪ್ ಅನ್ನು ಕಡಿತಗೊಳಿಸಿ ಆದೇಶಿಸಲಾಗಿದೆ. ವನ್ಯಜೀವಿ ಸಂಘರ್ಷ ಹೆಚ್ಚಳ ಹಾಗೂ ರೈತ ಸಂಘಟನೆಗಳ ಒತ್ತಾಯದ ಹಿನ್ನೆಲೆಯಲ್ಲಿ ಬಂಡೀಪುರ ಸಫಾರಿಯಲ್ಲಿ ಕೊನೆಯ 1 ಟ್ರಿಪ್ ಅನ್ನು ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ:-ಎಸ್ಸಿ ಒಳ ಮೀಸಲಾತಿ ಸಂಬಂಧ ಮಹತ್ವದ ನಿರ್ಧಾರ : ಇಲ್ಲಿವೆ ಸಭೆಯ ಮುಖ್ಯಾಂಶಗಳು
ಆದೇಶದಲ್ಲಿ ಏನಿದೆ?
ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6 ಗಂಟೆ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ಧದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿದ್ದಲ್ಲದೇ ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ಹಿನ್ನೆಲೆಯಲ್ಲಿ ಅ.28ರಿಂದಲೇ ಹಾಲಿ ಇರುವ ಸಫಾರಿಯ ಟ್ರಿಪ್ಗಳ ಪೈಕಿ 1 ಟ್ರಿಪ್ ಅನ್ನು ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…