ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ 29 ದಿನಗಳಲ್ಲಿ 2.16 ಕೋಟಿ ರೂ. ಸಂಗ್ರಹ

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.

ಎಣಿಕೆ ಕಾರ್ಯವು ಸಂಜೆ 7:40ರ ಗಂಟೆಯವರೆಗೂ ನಡೆಯಿತು.

ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಅಮಾವಾಸ್ಯೆ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,16,34,614 ರೂ. ಸಂಗ್ರಹವಾಗಿದೆ. ಚಿನ್ನ  78 ಗ್ರಾಂ ಮತ್ತು ಬೆಳ್ಳಿ 2 ಕೆಜಿ 350 ಗ್ರಾಂ ಸಂಗ್ರಹವಾಗಿದೆ.

ಇದಲ್ಲದೆ ಯು ಎಸ್ ಎ, ನೇಪಾಳ , ಮಲೇಶಿಯಾ ದೇಶದ  ವಿದೇಶಿ ನೋಟುಗಳು,  ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್,  ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago