ಚಾಮರಾಜನಗರ

ಕೋಟಿ ಒಡೆಯನಾದ ಮಲೆ ಮಾದಪ್ಪ: 30 ದಿನಗಳಲ್ಲಿ ಹುಂಡಿಯಲ್ಲಿ ಸಂಗ್ರಹವಾದ ಹಣವೆಷ್ಟು ಗೊತ್ತಾ.?

ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ.

ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.

ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,36,73,185 ನಗದು 70 ಗ್ರಾಂ ಚಿನ್ನ ಹಾಗೂ 1 ಕೆಜಿ 712 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಇದಲ್ಲದೇ ಹುಂಡಿಯಲ್ಲಿ 20 ವಿದೇಶಿ ನೋಟುಗಳು ಸಂಗ್ರಹವಾಗಿದ್ದು, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 14 ನೋಟುಗಳನ್ನು ಸಹ ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.

ಎಣಿಕೆ ಕಾರ್ಯದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ, ಭಾಗ್ಯಮ್ಮ, ಕುಪ್ಯಾ ಲೆಕ್ಕಾ ಪತ್ರ ಸಲಹೆಗಾರ ಮಹದೇವ್, ಲೆಕ್ಕ ಅಧೀಕ್ಷಕರಾದ ಗುರುಮಲ್ಲಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

2 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

2 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

4 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

6 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

6 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

7 hours ago