ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು ಮುಖ್ಯಪೇದೆಗಳನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಆದೇಶ ಹೊರಡಿಸಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಮುಖ್ಯಪೇದೆ ಅಣ್ಣಾ ದೊರೆ ಹಾಗೂ ಮುತ್ತುರಾಜು ಅಮಾನತುಗೊಂಡ ಪೊಲೀಸ್ ಪೇದೆಗಳಾಗಿದ್ದಾರೆ.
ಘಟನೆಯ ವಿವರ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಗುಪ್ತ ಮಾಹಿತಿ ಸಂಗ್ರಹಗಾರನಾಗಿ (ಎಸ್ ಬಿ)ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಅಣ್ಣಾ ದೊರೆರವರನ್ನು ಅಮಾನತ್ತು ಮಾಡಲಾಗಿದೆ. ಇದಲ್ಲದೆ ಸ್ಥಳೀಯರು ದೂರು ನೀಡಿದ ಹಿನ್ನೆಲೆ ಇನ್ನೋರ್ವ ಮುಖ್ಯಪೇದೆ ಮುತ್ತುರಾಜುರವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಎಎಸ್ಐಯಾಗಿದ್ದ ಚಿಕ್ಕಕ್ಕಾಳೇಗೌಡರವರನ್ನು ಬೇಗೂರು ಪೊಲೀಸ್ ಠಾಣೆಗೆ, ಪೇದೆಗಳಾದ ಅಮರೇಶ್ ಚಾಮರಾಜನಗರ ಪಟ್ಟಣ ಠಾಣೆ, ಜೆ ಎಸ್ ಶ್ರೀಗಂಧ ಕೊಳ್ಳೇಗಾಲ ಪಟ್ಟಣ ಠಾಣೆ, ಗುರುಕಿರಣ್ ಜೆ, ಸಿ ಇ.ಎನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇವರ ಸ್ಥಳಕ್ಕೆ ಸೆನ್ ಪೊಲೀಸ್ ಠಾಣೆಯ ಎಎಸ್ಐ, ಸಿ ಮಹದೇವಸ್ವಾಮಿ, ಮುಖ್ಯಪೇದೆ ನೀಲಕಂಠ, ಪೇದೆಗಳಾದ ನವೀನ್, ಮಲ್ಲನಗೌಡ ಬಿರಾದರ್ ಅವರನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ ಪಿ ಡಾ. ಬಿ.ಟಿ. ಕವಿತಾ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯ ಮಾರಾಟ ಮಾಡಲು ತಡೆಯಲು ಸ್ಥಳೀಯ ಪೊಲೀಸ್ ಠಾಣೆಯಿಂದ ನಾಲ್ವರು ಸಿಬ್ಬಂದಿಗಳನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಲಾಗಿದ್ದು ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮದ್ಯ ಮಾರಾಟಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…