ಚಾಮರಾಜನಗರ: ತಾಲೂಕಿನ ಅಯ್ಯನಪುರ ಗ್ರಾಮದ ಬಳಿ ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರು ಮಾರ್ಗ ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬುಧವಾರ ( ಅಕ್ಟೋಬರ್ 23 ) ಸಂಜೆ ನಡೆದಿದೆ.
ತಾಲ್ಲೂಕಿನ ಅಯ್ಯನಪುರ ಗ್ರಾಮದ ನಿವಾಸಿ ನಾಗೇಂದ್ರ( 45 ) ಮಲ್ಲೇಶ (48) ಮೃತ ದುರ್ದೈವಿಗಳು. ಈ ಇಬ್ಬರು ರೈತರು ತಮ್ಮ ಜಮೀನಿಗೆ ತೆರಳು ರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿರುವ ತಂತಿ ಬೈಕ್ ಸವಾರನ ಕುತ್ತಿಗೆಗೆ ಸಿಲುಕಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸೆಸ್ಕಾಂ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನಿಡಿ ಮಹಜರು ಮಾಡಿದ್ದಾರೆ. ಕುಟುಂಬಸ್ಥರ ರೋಧನೆ ಹೇಳತೀರದ್ದಾಗಿದೆ. ರೈತ ಮುಖಂಡರು ಹಾಗೂ ಗ್ರಾಮಸ್ಥರು ಸೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…