ಹನೂರು: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ಮೂರ್ತಿಗಳಿಗೆ ಜನಪ್ರತಿನಿಧಿಗಳು, ಮುಖಂಡರು ಹಾಗೂ ಸಾರ್ವಜನಿಕರು ವಿಶೇಷ ಪೂಜೆ ಸಲ್ಲಿಸಿದರು.
ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡಗಳಲ್ಲಿ 20ಕ್ಕೂ ಹೆಚ್ಚು ಗೌರಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಕ್ಷೇತ್ರ ವ್ಯಾಪ್ತಿಯಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದ ಸ್ಥಳಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬವನ್ನು ನಾಡಿನ ಸಂಸ್ಕೃತಿ, ಭಾವೈಕ್ಯತೆಯ ಪ್ರತೀಕವಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಕೆಲವು ಗ್ರಾಮಗಳಿಗೆ ನಾನೇ ಖುದ್ದು ಭೇಟಿ ನೀಡಿ ಗ್ರಾಮಸ್ಥರಿಗೆ ಶುಭ ಕೋರಿದ್ದೇನೆ. ಇನ್ನು ಕೆಲವು ಗ್ರಾಮಗಳಿಗೆ ಸಮಯದ ಅಭಾವದಿಂದ ಹೋಗಲು ಸಾಧ್ಯವಾಗಿಲ್ಲ. ಈ ವರ್ಷ ವಿಘ್ನ ವಿನಾಯಕ ಎಲ್ಲಾ ವಿಘ್ನಗಳನ್ನು ಬಗೆಹರಿಸಿ ರಾಜ್ಯಾದ್ಯಂತ ಉತ್ತಮ ಮಳೆ, ಬೆಳೆಯಾಗಿ ರೈತರು ಆರ್ಥಿಕವಾಗಿ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಶಾಂತ್ ಕುಮಾರ್, ವಿಜಯ್ ಕುಮಾರ್, ಶ್ರೀರಂಗಂ, ಯರಂಬಡಿ ಹುಚ್ಚಯ್ಯ, ರಾಜೇಂದ್ರ, ಮಹದೇವ್, ತಂಗವೇಲು, ಮುರುಗೇಶ್, ರಾಮು, ಅರುಣ್ ಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…