ಚಾಮರಾಜನಗರ

ಹನೂರು: 20 ಲಕ್ಷ ನಗದು, 308 ಗ್ರಾಂ ಚಿನ್ನ ಕಳವು

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.

ಹನೂರು ಪಟ್ಟಣದ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವವರು ತಮ್ಮ ಮೂರನೇ ಮಗಳಾದ ದರ್ಶಿನಿ ಮದುವೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಮದುವೆ ಖರ್ಚಿಗಾಗಿ ಮನೆಯಲ್ಲಿ 20 ಲಕ್ಷ ನಗದು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಆದರೆ ಕಾರ್ಯನಿಮಿತ್ತ ತಮಿಳುನಾಡಿಗೆ ಹೋಗಿ ಸೋಮವಾರ ತಡರಾತ್ರಿ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳೀಯ ನಿವಾಸಿಗಳ ನೆರವಿನಿಂದ ಹನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ವೃತ ನಿರೀಕ್ಷಕ ಶಶಿಕುಮಾರ್, ಎಸ್ ಐ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

ಬೆರಳಚ್ಚು ತಜ್ಞರಿಂದ ತಪಾಸಣೆ: ಪಟ್ಟಣದ ಚಿನ್ನದೊರೆ ಎಂಬುವರ ಮನೆಯಲ್ಲಿ ಕಳ್ಳತನವಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಚಾಮರಾಜನಗರದ ಬೆರಳಚ್ಚು ತಜ್ಞರು ಆಗಮಿಸಿ ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ವರಿಷ್ಠಾಧಿಕಾರಿ ಭೇಟಿ: ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಹನೂರು ಪಟ್ಟಣದ ಚಿನ್ನದೊರೆ ಎಂಬುವರ ಮನೆಯಲ್ಲಿ ಕಳ್ಳತನ ಆಗಿರುವುದು ತಿಳಿಯುತ್ತಿದ್ದಂತೆ ಬೆರಳಚ್ಚು ತಜ್ಞರಿಂದ ತಪಾಸಣೆ ಮಾಡಿಸಲಾಗಿದೆ, ಇದಲ್ಲದೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ವ್ಯಾಪ್ತಿಯ ಸುತ್ತಮುತ್ತಲಿನ ಸಿಸಿ ಕ್ಯಾಮರಗಳನ್ನು ಪರಿಶೀಲನೆ ಮಾಡಿ ಶೀಘ್ರದಲ್ಲಿಯೇ ಕಳ್ಳರನ್ನು ಪತ್ತೆಹಚ್ಚಲಾಗುವುದು, ಪಟ್ಟಣ ವ್ಯಾಪ್ತಿಯಲ್ಲಿ ಪ್ರತಿದಿನ ನಮ್ಮ ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದಾರೆ. ಈ ಪಾಯಿಂಟ್ ನಿಗದಿಪಡಿಸಿ ಇಂತಿಷ್ಟು ಸಮಯಕ್ಕೆ ಸರಿಯಾಗಿ ಬೀಟ್ ಮಾಡಲಾಗುತ್ತಿದೆ. ಕಳ್ಳತನ ತಡೆಯುವಲ್ಲಿ ನಮ್ಮ ಇಲಾಖೆಯು ಸೂಕ್ತ ಕ್ರಮ ವಹಿಸಲಿದೆ. ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ನಾನು ಅಧಿಕಾರ ವಹಿಸಿಕೊಂಡ ನಂತರ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದು ಪ್ರಕರಣ ಪತ್ತೆಹಚ್ಚಲಾಗಿದ್ದು, ಚಾಮರಾಜನಗರದ ಗಾಳಿಪುರ ಬಡಾವಣೆಯಲ್ಲಿ ಒಂಟಿ ಮನೆಯಲ್ಲಿ ಆಗಿರುವ ಕಳ್ಳತನ ಪ್ರಕರಣ ಪತ್ತೆಹಚ್ಚಲಾಗುತ್ತಿದೆ. ಇದೀಗ ಈ ಪ್ರಕರಣ ನಡೆದಿದ್ದು ಆದಷ್ಟು ಬೇಗ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ನಗದು, ಚಿನ್ನ ಕಳೆದುಕೊಂಡಿರುವ ಚಿನ್ನದೊರೆ ಮಾತನಾಡಿ ನನ್ನ ಮಗಳ ಮದುವೆಗೆ ಕಷ್ಟಪಟ್ಟು ಹಣ ಸಂಪಾದನೆ ಮಾಡಿದ್ದೇನೆ, ತಾವು ದಯವಿಟ್ಟು ಕಳ್ಳರನ್ನು ಪತ್ತೆ ಹಚ್ಚಿ ನಗದು ಹಾಗೂ ಚಿನ್ನವನ್ನು ಹುಡುಕಿ ಕೊಡುವಂತೆ ಮನವಿ ಮಾಡಿದರು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

4 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

4 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

4 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

4 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

4 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

5 hours ago