ಚಾಮರಾಜನಗರ

ಹನೂರು: 20 ಲಕ್ಷ ನಗದು, 308 ಗ್ರಾಂ ಚಿನ್ನ ಕಳವು

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.

ಹನೂರು ಪಟ್ಟಣದ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವವರು ತಮ್ಮ ಮೂರನೇ ಮಗಳಾದ ದರ್ಶಿನಿ ಮದುವೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಮದುವೆ ಖರ್ಚಿಗಾಗಿ ಮನೆಯಲ್ಲಿ 20 ಲಕ್ಷ ನಗದು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಆದರೆ ಕಾರ್ಯನಿಮಿತ್ತ ತಮಿಳುನಾಡಿಗೆ ಹೋಗಿ ಸೋಮವಾರ ತಡರಾತ್ರಿ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳೀಯ ನಿವಾಸಿಗಳ ನೆರವಿನಿಂದ ಹನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ವೃತ ನಿರೀಕ್ಷಕ ಶಶಿಕುಮಾರ್, ಎಸ್ ಐ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

ಬೆರಳಚ್ಚು ತಜ್ಞರಿಂದ ತಪಾಸಣೆ: ಪಟ್ಟಣದ ಚಿನ್ನದೊರೆ ಎಂಬುವರ ಮನೆಯಲ್ಲಿ ಕಳ್ಳತನವಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಚಾಮರಾಜನಗರದ ಬೆರಳಚ್ಚು ತಜ್ಞರು ಆಗಮಿಸಿ ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ವರಿಷ್ಠಾಧಿಕಾರಿ ಭೇಟಿ: ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಹನೂರು ಪಟ್ಟಣದ ಚಿನ್ನದೊರೆ ಎಂಬುವರ ಮನೆಯಲ್ಲಿ ಕಳ್ಳತನ ಆಗಿರುವುದು ತಿಳಿಯುತ್ತಿದ್ದಂತೆ ಬೆರಳಚ್ಚು ತಜ್ಞರಿಂದ ತಪಾಸಣೆ ಮಾಡಿಸಲಾಗಿದೆ, ಇದಲ್ಲದೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ವ್ಯಾಪ್ತಿಯ ಸುತ್ತಮುತ್ತಲಿನ ಸಿಸಿ ಕ್ಯಾಮರಗಳನ್ನು ಪರಿಶೀಲನೆ ಮಾಡಿ ಶೀಘ್ರದಲ್ಲಿಯೇ ಕಳ್ಳರನ್ನು ಪತ್ತೆಹಚ್ಚಲಾಗುವುದು, ಪಟ್ಟಣ ವ್ಯಾಪ್ತಿಯಲ್ಲಿ ಪ್ರತಿದಿನ ನಮ್ಮ ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದಾರೆ. ಈ ಪಾಯಿಂಟ್ ನಿಗದಿಪಡಿಸಿ ಇಂತಿಷ್ಟು ಸಮಯಕ್ಕೆ ಸರಿಯಾಗಿ ಬೀಟ್ ಮಾಡಲಾಗುತ್ತಿದೆ. ಕಳ್ಳತನ ತಡೆಯುವಲ್ಲಿ ನಮ್ಮ ಇಲಾಖೆಯು ಸೂಕ್ತ ಕ್ರಮ ವಹಿಸಲಿದೆ. ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ನಾನು ಅಧಿಕಾರ ವಹಿಸಿಕೊಂಡ ನಂತರ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದು ಪ್ರಕರಣ ಪತ್ತೆಹಚ್ಚಲಾಗಿದ್ದು, ಚಾಮರಾಜನಗರದ ಗಾಳಿಪುರ ಬಡಾವಣೆಯಲ್ಲಿ ಒಂಟಿ ಮನೆಯಲ್ಲಿ ಆಗಿರುವ ಕಳ್ಳತನ ಪ್ರಕರಣ ಪತ್ತೆಹಚ್ಚಲಾಗುತ್ತಿದೆ. ಇದೀಗ ಈ ಪ್ರಕರಣ ನಡೆದಿದ್ದು ಆದಷ್ಟು ಬೇಗ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ನಗದು, ಚಿನ್ನ ಕಳೆದುಕೊಂಡಿರುವ ಚಿನ್ನದೊರೆ ಮಾತನಾಡಿ ನನ್ನ ಮಗಳ ಮದುವೆಗೆ ಕಷ್ಟಪಟ್ಟು ಹಣ ಸಂಪಾದನೆ ಮಾಡಿದ್ದೇನೆ, ತಾವು ದಯವಿಟ್ಟು ಕಳ್ಳರನ್ನು ಪತ್ತೆ ಹಚ್ಚಿ ನಗದು ಹಾಗೂ ಚಿನ್ನವನ್ನು ಹುಡುಕಿ ಕೊಡುವಂತೆ ಮನವಿ ಮಾಡಿದರು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

2 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

2 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

2 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

2 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

13 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

13 hours ago