ಚಾಮರಾಜನಗರ

ಹನೂರು: 20 ಲಕ್ಷ ನಗದು, 308 ಗ್ರಾಂ ಚಿನ್ನ ಕಳವು

ಹನೂರು: ಪಟ್ಟಣದ ಹನ್ನೊಂದನೇ ವಾರ್ಡಿನ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ 20 ಲಕ್ಷ ನಗದು ಹಾಗೂ 308 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.

ಹನೂರು ಪಟ್ಟಣದ ನಿವಾಸಿಗಳಾದ ಚಿನ್ನದೊರೆ ಹಾಗೂ ಧನಲಕ್ಷ್ಮಿ ಎಂಬುವವರು ತಮ್ಮ ಮೂರನೇ ಮಗಳಾದ ದರ್ಶಿನಿ ಮದುವೆಗೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಮದುವೆ ಖರ್ಚಿಗಾಗಿ ಮನೆಯಲ್ಲಿ 20 ಲಕ್ಷ ನಗದು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಆದರೆ ಕಾರ್ಯನಿಮಿತ್ತ ತಮಿಳುನಾಡಿಗೆ ಹೋಗಿ ಸೋಮವಾರ ತಡರಾತ್ರಿ ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ತಕ್ಷಣ ಸ್ಥಳೀಯ ನಿವಾಸಿಗಳ ನೆರವಿನಿಂದ ಹನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ವೃತ ನಿರೀಕ್ಷಕ ಶಶಿಕುಮಾರ್, ಎಸ್ ಐ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

ಬೆರಳಚ್ಚು ತಜ್ಞರಿಂದ ತಪಾಸಣೆ: ಪಟ್ಟಣದ ಚಿನ್ನದೊರೆ ಎಂಬುವರ ಮನೆಯಲ್ಲಿ ಕಳ್ಳತನವಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಚಾಮರಾಜನಗರದ ಬೆರಳಚ್ಚು ತಜ್ಞರು ಆಗಮಿಸಿ ತಪಾಸಣೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ವರಿಷ್ಠಾಧಿಕಾರಿ ಭೇಟಿ: ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ ಹನೂರು ಪಟ್ಟಣದ ಚಿನ್ನದೊರೆ ಎಂಬುವರ ಮನೆಯಲ್ಲಿ ಕಳ್ಳತನ ಆಗಿರುವುದು ತಿಳಿಯುತ್ತಿದ್ದಂತೆ ಬೆರಳಚ್ಚು ತಜ್ಞರಿಂದ ತಪಾಸಣೆ ಮಾಡಿಸಲಾಗಿದೆ, ಇದಲ್ಲದೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ವ್ಯಾಪ್ತಿಯ ಸುತ್ತಮುತ್ತಲಿನ ಸಿಸಿ ಕ್ಯಾಮರಗಳನ್ನು ಪರಿಶೀಲನೆ ಮಾಡಿ ಶೀಘ್ರದಲ್ಲಿಯೇ ಕಳ್ಳರನ್ನು ಪತ್ತೆಹಚ್ಚಲಾಗುವುದು, ಪಟ್ಟಣ ವ್ಯಾಪ್ತಿಯಲ್ಲಿ ಪ್ರತಿದಿನ ನಮ್ಮ ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದಾರೆ. ಈ ಪಾಯಿಂಟ್ ನಿಗದಿಪಡಿಸಿ ಇಂತಿಷ್ಟು ಸಮಯಕ್ಕೆ ಸರಿಯಾಗಿ ಬೀಟ್ ಮಾಡಲಾಗುತ್ತಿದೆ. ಕಳ್ಳತನ ತಡೆಯುವಲ್ಲಿ ನಮ್ಮ ಇಲಾಖೆಯು ಸೂಕ್ತ ಕ್ರಮ ವಹಿಸಲಿದೆ. ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ನಾನು ಅಧಿಕಾರ ವಹಿಸಿಕೊಂಡ ನಂತರ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದು ಪ್ರಕರಣ ಪತ್ತೆಹಚ್ಚಲಾಗಿದ್ದು, ಚಾಮರಾಜನಗರದ ಗಾಳಿಪುರ ಬಡಾವಣೆಯಲ್ಲಿ ಒಂಟಿ ಮನೆಯಲ್ಲಿ ಆಗಿರುವ ಕಳ್ಳತನ ಪ್ರಕರಣ ಪತ್ತೆಹಚ್ಚಲಾಗುತ್ತಿದೆ. ಇದೀಗ ಈ ಪ್ರಕರಣ ನಡೆದಿದ್ದು ಆದಷ್ಟು ಬೇಗ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ನಗದು, ಚಿನ್ನ ಕಳೆದುಕೊಂಡಿರುವ ಚಿನ್ನದೊರೆ ಮಾತನಾಡಿ ನನ್ನ ಮಗಳ ಮದುವೆಗೆ ಕಷ್ಟಪಟ್ಟು ಹಣ ಸಂಪಾದನೆ ಮಾಡಿದ್ದೇನೆ, ತಾವು ದಯವಿಟ್ಟು ಕಳ್ಳರನ್ನು ಪತ್ತೆ ಹಚ್ಚಿ ನಗದು ಹಾಗೂ ಚಿನ್ನವನ್ನು ಹುಡುಕಿ ಕೊಡುವಂತೆ ಮನವಿ ಮಾಡಿದರು. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

17 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago