ಚಾಮರಾಜನಗರ : ಜಿಲ್ಲೆಯ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೂ, ತಾಯಿ ಹುಲಿ ಕಾಣಿಸಿಕೊಂಡಿಲ್ಲ.
ಅರಣ್ಯ ಇಲಾಖೆ ಸಿಬ್ಬಂದಿ ಚಾಮರಾಜನಗರ ತಾಲ್ಲೂಕಿನ ಪುಣಜನೂರು-ಬೇಡಗುಳಿ ಸಂಪರ್ಕಿಸುವ ರಸ್ತೆಯಲ್ಲಿ ರಾತ್ರಿ ಗಸ್ತು ಮಾಡುವಾಗ ಬಜೇಬಾವಿ ಅರಣ್ಯ ಪ್ರದೇಶದಲ್ಲಿ 2 ಹುಲಿ ಮರಿಗಳು ಸೋಮವಾರ ಸಹಜವಾಗಿ ಕಾಣಿಸಿಕೊಂಡಿವೆ. ನಂತರ ಸಿಬ್ಬಂದಿ ಕಪ್ಪಿಣ ಕಣಿವೆ ಅರಣ್ಯ ಪ್ರದೇಶದವರೆಗೂ ಗಸ್ತು ಮಾಡಿಕೊಂಡು ಮರಳಿ ಪುಣಜನೂರು ಕಡೆಗೆ ವಾಪಸ್ಸು ಬರುವಾಗ ಅದೇ ಎರಡು ಹುಲಿ ಮರಿಗಳು ಅಲ್ಲೇ ಎದುರಾಗಿವೆ.
ಸಂಶಯ ಬಂದು ಸುತ್ತಲೂ ಪರಿಶೀಲಿಸಿ ನೋಡಿದಾಗ ತಾಯಿ ಹುಲಿ ಇರುವಿಕೆಯ ಬಗ್ಗೆ ಯಾವುದೇ ಸಂಕೇತ ಸಿಬ್ಬಂದಿಗೆ ಕಂಡು ಬರಲಿಲ್ಲ. ಹೀಗಾಗಿ, ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸುತ್ತಮುತ್ತಲಿನ ಸ್ಥಳಗಳಲ್ಲಿ ಕ್ಯಾಮೆರಾ ಟ್ರಾಪ್ಗಳನ್ನು ಅಳವಡಿಸಿ, ತಾಯಿ ಹುಲಿಯ ಚಲನವಲನಗಳ ಮೇಲೆ ನಿಗಾವಹಿಸಲು ರಾತ್ರಿ ಕಾವಲು ಸಿಬ್ಬಂದಿ ನಿಯೋಜಿಸಲಾಗಿದೆ. ಮಂಗಳವಾರ ಇಲಾಖಾ ಸಿಬ್ಬಂದಿ ತಾಯಿ ಹುಲಿಯನ್ನು ಪತ್ತೆ ಮಾಡಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದಾಗ ಮತ್ತೊಂದು ಹುಲಿ ಮರಿ ಪತ್ತೆಯಾಗಿದೆ.
ಇದನ್ನೂ ಓದಿ:-ಮೈಸೂರು | ಶ್ರೀಮಂತರ ಸೋಗಿನಲ್ಲಿ ಪೀಠೋಪಕರಣ ಖರೀದಿಗೆ ಬಂದ ಕುಟುಂಬ : ಮಳಿಗೆ ಮಾಲೀಕನಿಗೆ 99.65 ಲಕ್ಷ ರೂ. ವಂಚನೆ
ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ (ಬಿಆರ್ ಟಿ) ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರಾದ ಶ್ರೀಪತಿ ಅವರ ಮಾರ್ಗದರ್ಶನದಂತೆ ಮೂರು ಹುಲಿ ಮರಿಗಳನ್ನು ಇಲಾಖಾ ಪಶುವೈದ್ಯರ ಮೇಲುಸ್ತುವಾರಿಯಲ್ಲಿ, ಎನ್ ಟಿಸಿಎ ಮಾರ್ಗಸೂಚಿಯಂತೆ ರಕ್ಷಣೆ ನಿಗಾ ವಹಿಸಲಾಗಿದೆ ಎಂದು ಚಾಮರಾಜನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…