ಚಾಮರಾಜನಗರ : ಜಿಲ್ಲೆಯ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೂ, ತಾಯಿ ಹುಲಿ ಕಾಣಿಸಿಕೊಂಡಿಲ್ಲ.
ಅರಣ್ಯ ಇಲಾಖೆ ಸಿಬ್ಬಂದಿ ಚಾಮರಾಜನಗರ ತಾಲ್ಲೂಕಿನ ಪುಣಜನೂರು-ಬೇಡಗುಳಿ ಸಂಪರ್ಕಿಸುವ ರಸ್ತೆಯಲ್ಲಿ ರಾತ್ರಿ ಗಸ್ತು ಮಾಡುವಾಗ ಬಜೇಬಾವಿ ಅರಣ್ಯ ಪ್ರದೇಶದಲ್ಲಿ 2 ಹುಲಿ ಮರಿಗಳು ಸೋಮವಾರ ಸಹಜವಾಗಿ ಕಾಣಿಸಿಕೊಂಡಿವೆ. ನಂತರ ಸಿಬ್ಬಂದಿ ಕಪ್ಪಿಣ ಕಣಿವೆ ಅರಣ್ಯ ಪ್ರದೇಶದವರೆಗೂ ಗಸ್ತು ಮಾಡಿಕೊಂಡು ಮರಳಿ ಪುಣಜನೂರು ಕಡೆಗೆ ವಾಪಸ್ಸು ಬರುವಾಗ ಅದೇ ಎರಡು ಹುಲಿ ಮರಿಗಳು ಅಲ್ಲೇ ಎದುರಾಗಿವೆ.
ಸಂಶಯ ಬಂದು ಸುತ್ತಲೂ ಪರಿಶೀಲಿಸಿ ನೋಡಿದಾಗ ತಾಯಿ ಹುಲಿ ಇರುವಿಕೆಯ ಬಗ್ಗೆ ಯಾವುದೇ ಸಂಕೇತ ಸಿಬ್ಬಂದಿಗೆ ಕಂಡು ಬರಲಿಲ್ಲ. ಹೀಗಾಗಿ, ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ಸುತ್ತಮುತ್ತಲಿನ ಸ್ಥಳಗಳಲ್ಲಿ ಕ್ಯಾಮೆರಾ ಟ್ರಾಪ್ಗಳನ್ನು ಅಳವಡಿಸಿ, ತಾಯಿ ಹುಲಿಯ ಚಲನವಲನಗಳ ಮೇಲೆ ನಿಗಾವಹಿಸಲು ರಾತ್ರಿ ಕಾವಲು ಸಿಬ್ಬಂದಿ ನಿಯೋಜಿಸಲಾಗಿದೆ. ಮಂಗಳವಾರ ಇಲಾಖಾ ಸಿಬ್ಬಂದಿ ತಾಯಿ ಹುಲಿಯನ್ನು ಪತ್ತೆ ಮಾಡಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದಾಗ ಮತ್ತೊಂದು ಹುಲಿ ಮರಿ ಪತ್ತೆಯಾಗಿದೆ.
ಇದನ್ನೂ ಓದಿ:-ಮೈಸೂರು | ಶ್ರೀಮಂತರ ಸೋಗಿನಲ್ಲಿ ಪೀಠೋಪಕರಣ ಖರೀದಿಗೆ ಬಂದ ಕುಟುಂಬ : ಮಳಿಗೆ ಮಾಲೀಕನಿಗೆ 99.65 ಲಕ್ಷ ರೂ. ವಂಚನೆ
ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ (ಬಿಆರ್ ಟಿ) ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕರಾದ ಶ್ರೀಪತಿ ಅವರ ಮಾರ್ಗದರ್ಶನದಂತೆ ಮೂರು ಹುಲಿ ಮರಿಗಳನ್ನು ಇಲಾಖಾ ಪಶುವೈದ್ಯರ ಮೇಲುಸ್ತುವಾರಿಯಲ್ಲಿ, ಎನ್ ಟಿಸಿಎ ಮಾರ್ಗಸೂಚಿಯಂತೆ ರಕ್ಷಣೆ ನಿಗಾ ವಹಿಸಲಾಗಿದೆ ಎಂದು ಚಾಮರಾಜನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…