ಚಾಮರಾಜನಗರ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸಾವು : ಸರ್ಕಾರಿ ನೌಕರಿ ನೀಡುವಂತೆ ಮೃತ ಕುಟುಂಬಸ್ಥರ ಮನವಿ

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಿಲ್ಲ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಲಿಲ್ಲವೆಂದು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇದಕ್ಕೆ ಎಸ್​ಡಿಪಿಐ ಕೂಡ ಬೆಂಬಲ ಸೂಚಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಹೀಗಾಗಿ ಸದ್ಯ ಪರಿಹಾರ ಹಣಕ್ಕಿಂತ ನೌಕರಿ ಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಆಕ್ಸಿಜನ್ ಕೊರತೆಯಿಂದ 36 ಜನ ಸಾವು : ಮೇ 2ರಂದು 2021ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

lokesh

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

15 mins ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

28 mins ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

50 mins ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

1 hour ago

ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ

ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್‌…

2 hours ago

ನಟ ದರ್ಶನ್‌ 49ನೇ ಹುಟ್ಟುಹಬ್ಬಕ್ಕೆ ಪತ್ನಿ ವಿಜಯಲಕ್ಷ್ಮೀ ಶುಭಾಶಯ

ನಟ ದರ್ಶನ್‌ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ ಬೆಂಗಳೂರಿನ…

2 hours ago