ಚಾಮರಾಜನಗರ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಜನ ಸಾವು : ಸರ್ಕಾರಿ ನೌಕರಿ ನೀಡುವಂತೆ ಮೃತ ಕುಟುಂಬಸ್ಥರ ಮನವಿ

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಿಲ್ಲ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಲಿಲ್ಲವೆಂದು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಇದಕ್ಕೆ ಎಸ್​ಡಿಪಿಐ ಕೂಡ ಬೆಂಬಲ ಸೂಚಿಸಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಹೀಗಾಗಿ ಸದ್ಯ ಪರಿಹಾರ ಹಣಕ್ಕಿಂತ ನೌಕರಿ ಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಆಕ್ಸಿಜನ್ ಕೊರತೆಯಿಂದ 36 ಜನ ಸಾವು : ಮೇ 2ರಂದು 2021ರಂದು ಚಾಮರಾಜನಗರ ಜಿಲ್ಲೆಯ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯಾಗಬೇಕಿತ್ತು. ಆದರೆ ಮೈಸೂರಿಂದ ಆಕ್ಸಿಜನ್ ಬರಲೇ ಇಲ್ಲ, ಮೈಸೂರಿನಿಂದ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೇ ರಾತ್ರಿ 10:30ರಿಂದ ಬೆಳಗಿನ ಜಾವ 2:30ರ ವರೆಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ವೆಂಟಿಲೇಟರ್‌, ಐಸಿಯು ಹಾಗೂ ಉಸಿರಾಟ ತೊಂದರೆಯಿಂದ ಆಮ್ಲಜನಕದ ನೆರವಿನಲ್ಲಿದ್ದ ರೋಗಿಗಳು ಸಾವನ್ನಪ್ಪಿದ್ದರು.

ದುರ್ಘಟನೆಯಲ್ಲಿ ಸರಕಾರದ ಅಂಕಿಅಂಶಗಳ ಪ್ರಕಾರ 24 ಮಂದಿ ಮೃತಪಟ್ಟಿದ್ದಾರೆ ಎಂದಿತ್ತು. ಆದರೆ ಪ್ರಕರಣದ ತನಿಖೆಗಾಗಿ ಹೈಕೋರ್ಟ್‌ ನೇಮಿಸಿದ್ದ ತನಿಖಾ ಸಮಿತಿ 36 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ನೀಡಿತ್ತು. ಹೈಕೋರ್ಟ್‌ನ ಸೂಚನೆಯಂತೆ, ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ಕಳೆದ ವರ್ಷ 2021ರಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ತಲಾ 2 ಲಕ್ಷ ರೂ ಹಾಗೂ ಆಗಸ್ಟ್‌ ಎರಡನೇ ವಾರದಲ್ಲಿ 13 ಮಂದಿಗೆ ಹೆಚ್ಚುವರಿಯಾಗಿ ತಲಾ 3 ಲಕ್ಷ ಹಣವನ್ನು ತಾತ್ಕಾಲಿಕ ಪರಿಹಾರವಾಗಿ ಜಿಲ್ಲಾಡಳಿತ ವಿತರಿಸಿತ್ತು.

lokesh

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

1 hour ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

1 hour ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

2 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

5 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

5 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

15 hours ago