ಕೊಳ್ಳೇಗಾಲ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ನಾಲ್ಕು ಹೆಕ್ಟೇರ್ ಕಬ್ಬು ಭಸ್ಮವಾದ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವಪ್ರಭು ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ರೈತ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಕಳೆದ ವರ್ಷವೂ ಒಂದೂವರೆ ಹೆಕ್ಟೇರ್ ಕಬ್ಬು ಕಳೆದುಕೊಂಡಿದ್ದ ಈ ಕುಟುಂಬಕ್ಕೆ ಈಗ ಮತ್ತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನಾಲ್ಕು ಹೆಕ್ಟೇರ್ ಹಾಗೂ ಪೈಪ್ಲೈನ್ ಸೇರಿದಂತೆ ಅಪಾರ ಪ್ರಮಾಣದ ನಷ್ಟವಾಗಿದೆ. ಘಟನೆಯಿಂದ ರೈತರ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ಮೂಲಕ ಹೆಚ್ಚಿನ ಅನಾಹುತ ಆಗದಂತೆ ತಡೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದೆ. ಇನ್ನು ಪದೇ ಪದೇ ಆಗುತ್ತಿರುವ ದುರ್ಘಟನೆಯಿಂದ ಜಮೀನನ್ನೇ ಮಾರಾಟ ಮಾಡಲು ರೈತ ಕುಟುಂಬಗಳು ನಿರ್ಧಾರ ಮಾಡಿವೆ ಎಂದು ತಿಳಿದುಬಂದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳಿಗೆ ಈ ಬಗ್ಗೆ ಎಷ್ಟು ಬಾರಿ ಹೇಳಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತ ಕುಟುಂಬಗಳು ಆರೋಪಿಸಿವೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…