ಕೊಳ್ಳೇಗಾಲ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ನಾಲ್ಕು ಹೆಕ್ಟೇರ್ ಕಬ್ಬು ಭಸ್ಮವಾದ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇವಪ್ರಭು ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ರೈತ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಕಳೆದ ವರ್ಷವೂ ಒಂದೂವರೆ ಹೆಕ್ಟೇರ್ ಕಬ್ಬು ಕಳೆದುಕೊಂಡಿದ್ದ ಈ ಕುಟುಂಬಕ್ಕೆ ಈಗ ಮತ್ತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನಾಲ್ಕು ಹೆಕ್ಟೇರ್ ಹಾಗೂ ಪೈಪ್ಲೈನ್ ಸೇರಿದಂತೆ ಅಪಾರ ಪ್ರಮಾಣದ ನಷ್ಟವಾಗಿದೆ. ಘಟನೆಯಿಂದ ರೈತರ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ಮೂಲಕ ಹೆಚ್ಚಿನ ಅನಾಹುತ ಆಗದಂತೆ ತಡೆಯುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದೆ. ಇನ್ನು ಪದೇ ಪದೇ ಆಗುತ್ತಿರುವ ದುರ್ಘಟನೆಯಿಂದ ಜಮೀನನ್ನೇ ಮಾರಾಟ ಮಾಡಲು ರೈತ ಕುಟುಂಬಗಳು ನಿರ್ಧಾರ ಮಾಡಿವೆ ಎಂದು ತಿಳಿದುಬಂದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳಿಗೆ ಈ ಬಗ್ಗೆ ಎಷ್ಟು ಬಾರಿ ಹೇಳಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತ ಕುಟುಂಬಗಳು ಆರೋಪಿಸಿವೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…