ಚಾಮರಾಜನಗರ

ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರಿಸಿ ಎಂದು ರಾಜ್ಯದ ಸಂಸದರಿಗೆ ಕರೆ ಕೊಟ್ಟರು.

ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್‌ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಸಿಎಂ ಆಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಅವರು, ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಎಂಭತ್ತು ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್‌ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago