ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಏತ ನೀರಾವರಿ ಯೋಜನೆಯ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ನೀಡಿರುವುದರಿಂದ ಶಾಶ್ವತ ನೀರಿನ ಸಮಸ್ಯೆ ಬಗೆಹರಿಯಲಿದೆ. ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಒತ್ತು ನೀಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ವೆಂಕಟೇಶ್, ಹೆಚ್ ಸಿ ಮಹದೇವಪ್ಪ, ಸಂಸದ ಸುನಿಲ್ ಬೋಸ್ ರವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನೂರು ತಾಲೂಕಿನ ರಾಮಪುರ ಹೋಬಳಿ ವ್ಯಾಪ್ತಿಯ ಪ್ರಮುಖ ಜಲಾಶಯಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಹಲವಾರು ವರ್ಷಗಳಿಂದ ಶ್ರಮವಹಿಸಿ ಡಿಪಿಆರ್ ಕೂಡ ಸಿದ್ಧಪಡಿಸಿ ಅನುಮೋದನೆ ಪಡೆದುಕೊಳ್ಳಲಾಗಿತ್ತು. ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರಿಂದ ನಮಗೆ ಅನುದಾನ ನೀಡಲಿಲ್ಲ, ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆ ಘೋಷಣೆಯಾಗಿರುವುದರಿಂದ ಶಾಶ್ವತವಾಗಿ ನೀರಿನ ಸಮಸ್ಯೆ ಬಗೆಯರಿಯಲಿದೆ. ಒಟ್ಟಾರೆ ಸುಮಾರು 12 ಸಾವಿರ ಎಕರೆ ಪ್ರದೇಶದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಕೊಳ್ಳೇಗಾಲ ಪಟ್ಟಣದಿಂದ ಹನೂರು ಪಟ್ಟಣದವರೆಗೆ ಕೆಶಿಪ್ ಯೋಜನೆಯಡಿ ಮೊದಲ ಹಂತದಲ್ಲಿ ರಸ್ತೆ ಅಭಿವೃದ್ಧಿಪಡಿಸಲು 108 ಕೋಟಿ ಅನುದಾನ ನೀಡಿ ಕಾಮಗಾರಿ ಪ್ರಾರಂಭ ಮಾಡಲಾಗಿತ್ತು. ಇದೀಗ ಕಾಮಗಾರಿ ಅಂತಿಮ ಹಂತದಲ್ಲಿದೆ. ಕಳೆದ ಬಾರಿಯೇ ಹನೂರು ಪಟ್ಟಣದಿಂದ ರಾಮಾಪುರ ಮಾರ್ಗವಾಗಿ ಪಾಲರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಕೆಶಿಪ್ ಯೋಜನೆಗೂ ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿತ್ತು. ಆದರೆ ಹಣ ಬಿಡುಗಡೆಯಾಗಿರಲಿಲ್ಲ ಇದೀಗ ರಸ್ತೆ ಕಾಮಗಾರಿ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಕೆ ಶಿಪ್ ಎರಡನೇ ಹಂತದ ಕಾಮಗಾರಿಯ ಪೂರ್ಣಗೊಂಡು ಕ್ಷೇತ್ರದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಒಟ್ಟಾರೆ ಹಲವು ವರ್ಷಗಳ ಬೇಡಿಕೆ ಇದೀಗ ನೆರವೇರಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಹಾಗೂ ವ್ಯವಸಾಯಕ್ಕೆ ನೀರಾವರಿ ವ್ಯವಸ್ಥೆಗೆ ಹೆಚ್ಚಿನ ಅನುಕೂಲವಾಗಲಿದೆ. ಎರಡನೇ ಹಂತದ ಕೆಶಿಪ್ ಕಾಮಗಾರಿ ಪ್ರಾರಂಭಗೊಂಡು ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿದರೆ ಪ್ರವಾಸೋದ್ಯಮಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಒಟ್ಟಾರೆ ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…