ಚಾಮರಾಜನಗರ

5 ಹುಲಿಗಳ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರಣ್ಯ ಇಲಾಖೆ ಕಸ್ಟಡಿಗೆ

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು ದಿನಗಳ ಕಾಲ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದಾರೆ.

ಚಾಮರಾಜನಗರ ಜಿಲ್ಲಾ ಕೊಳ್ಳೇಗಾಲ ಜೆಎಂಎಫ್‌ ಕೋರ್ಟ್‌ ಆರೋಪಿಗಳನ್ನು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ತನಿಖೆ ವೇಳೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ್ದವು. ಪ್ರೀತಿಯಿಂದ ಸಾಕಿದ್ದ ಹಸುವನ್ನು ಹುಲಿ ಕೊಂದು ಹಾಕಿತ್ತು. ಇದರಿಂದ ಬೇಸತ್ತಿದ್ದ ಮಾದುರಾಜು ಹಾಗೂ ನಾಗರಾಜು ಸತ್ತ ಹಸುವಿಗೆ ವಿಷವಿಟ್ಟಿದ್ದರು. ಹಸುವನ್ನು ತಿಂದಿದ್ದ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

37 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

1 hour ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

2 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

2 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago