5 tiger killing case: Three accused taken into custody by Forest Department
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು ದಿನಗಳ ಕಾಲ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲಾ ಕೊಳ್ಳೇಗಾಲ ಜೆಎಂಎಫ್ ಕೋರ್ಟ್ ಆರೋಪಿಗಳನ್ನು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ತನಿಖೆ ವೇಳೆ ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.
ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ್ದವು. ಪ್ರೀತಿಯಿಂದ ಸಾಕಿದ್ದ ಹಸುವನ್ನು ಹುಲಿ ಕೊಂದು ಹಾಕಿತ್ತು. ಇದರಿಂದ ಬೇಸತ್ತಿದ್ದ ಮಾದುರಾಜು ಹಾಗೂ ನಾಗರಾಜು ಸತ್ತ ಹಸುವಿಗೆ ವಿಷವಿಟ್ಟಿದ್ದರು. ಹಸುವನ್ನು ತಿಂದಿದ್ದ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ಸಾವನ್ನಪ್ಪಿದ್ದವು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…