ಚಾಮರಾಜನಗರ

5 ಗ್ರಾಮ ಸೌರ ಸ್ಪರ್ಧೆಗೆ ಆಯ್ಕೆ : ಅಂತಿಮ ಆಯ್ಕೆ ಗ್ರಾಮಕ್ಕೆ 1 ಕೋಟಿ ರೂ!

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ.

ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ೧ ಕೋಟಿ ರೂ. ಪ್ರೋತ್ಸಾಹ ಧನ ಲಭಿಸಲಿದ್ದು ಮೈಸೂರಿನ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಿತಿ (ಡಿಎಲ್‌ಸಿ) ಸಭೆಯಲ್ಲಿ ಈ ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ.

ನವೀಕರಿಸಬಹುದಾದ ಇಂಧನ ಬಳಕೆಯ ಉತ್ತೇಜನ, ಮನೆಗಳಿಗೆ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಮೇಲ್ಚಾವಣಿ ಸೌರಶಕ್ತಿ ಅಳವಡಿಕೆ ,ಇತರ ಗ್ರಾಹಕರಿಗೆ ಸಬ್ಸಿಡಿ ರಹಿತ ಯೋಜನೆಯಡಿಯಲ್ಲಿ ಚಾವಣಿ ಸೌರಶಕ್ತಿ ಅಳವಡಿಕೆಗೆ ಪ್ರೋತ್ಸಾಹ, ನೀರಾವರಿ ಪಂಪ್‌ಸೆಟ್‌ಗಳಿಗೆ ಪಿಎಂ-ಕುಸುಮ್ ಯೋಜನೆ ಅಡಿಯಲ್ಲಿ ಅನುಷ್ಠಾನ, ಸರ್ಕಾರಿ ಕಟ್ಟಡಗಳ ಮೇಲೆ ಸೌರಶಕ್ತಿ ಅಳವಡಿಕೆ, ಕುಡಿಯುವ ನೀರು ಮತ್ತು ಬೀದಿ ದೀಪಗಳಿಗೆ ಸೌರಶಕ್ತಿ ಬಳಕೆಗೆ ಸಂಬಂಽಸಿದಂತೆ ಈ ಐದು ಗ್ರಾಮಪಂಚಾಯಿತಿ ಮಟ್ಟದಲ್ಲಿ ಸ್ಪರ್ಧೆ ನಡೆಯಲಿದೆ.

ಈ ಸ್ಪರ್ಧೆಯು ಪ್ರಸಕ್ತ ವರ್ಷದ ಡಿ. ೩೧ರವರೆಗೆ ನಡೆಯಲಿದ್ದು ಸ್ಪರ್ಧೆಯ ಅಂತ್ಯದಲ್ಲಿ ಮೌಲ್ಯಮಾಪನದ ಆಧಾರದ ಮೇಲೆ ಗರಿಷ್ಠ ನವೀಕರಿಸಬಹುದಾದ ಇಂಧನ ಬಳಸಿದ ಗ್ರಾಮವನ್ನು ಮಾದರಿ ಸೌರ ಗ್ರಾಮವೆಂದು ಘೋಷಿಸಲಾಗುತ್ತದೆ. ಆಯ್ಕೆಯಾದ ಗ್ರಾಮಕ್ಕೆ ನವೀಕರಿಸಬಹುದಾದ ಇಂಧನ ಸಚಿವಾಲಯದ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಜಿಲ್ಲಾಽಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

9 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

11 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

12 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

13 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

14 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

15 hours ago