ಚಾಮರಾಜನಗರ

5 ಗ್ರಾಮ ಸೌರ ಸ್ಪರ್ಧೆಗೆ ಆಯ್ಕೆ : ಅಂತಿಮ ಆಯ್ಕೆ ಗ್ರಾಮಕ್ಕೆ 1 ಕೋಟಿ ರೂ!

ಚಾಮರಾಜನಗರ : ಜಿಲ್ಲೆಯ ಹರದನಹಳ್ಳಿ, ಹಂಗಳ, ದೊಡ್ಡಿಂದುವಾಡಿ, ಮಾರ್ಟಳ್ಳಿ ಹಾಗೂ ಕೆಸ್ತೂರು ಗ್ರಾಮಗಳನ್ನು ಸೌರ ಸ್ಪರ್ಧಾ ಗ್ರಾಮಗಳೆಂದು ಗುರುತಿಸಲಾಗಿದೆ.

ಈ ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಗುರುತಿಲಾಗಿದೆ. ಅಂತಿಮವಾಗಿ, ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ೧ ಕೋಟಿ ರೂ. ಪ್ರೋತ್ಸಾಹ ಧನ ಲಭಿಸಲಿದ್ದು ಮೈಸೂರಿನ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಸಮಿತಿ (ಡಿಎಲ್‌ಸಿ) ಸಭೆಯಲ್ಲಿ ಈ ಗ್ರಾಮಗಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ.

ನವೀಕರಿಸಬಹುದಾದ ಇಂಧನ ಬಳಕೆಯ ಉತ್ತೇಜನ, ಮನೆಗಳಿಗೆ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆ ಅಡಿಯಲ್ಲಿ ಮೇಲ್ಚಾವಣಿ ಸೌರಶಕ್ತಿ ಅಳವಡಿಕೆ ,ಇತರ ಗ್ರಾಹಕರಿಗೆ ಸಬ್ಸಿಡಿ ರಹಿತ ಯೋಜನೆಯಡಿಯಲ್ಲಿ ಚಾವಣಿ ಸೌರಶಕ್ತಿ ಅಳವಡಿಕೆಗೆ ಪ್ರೋತ್ಸಾಹ, ನೀರಾವರಿ ಪಂಪ್‌ಸೆಟ್‌ಗಳಿಗೆ ಪಿಎಂ-ಕುಸುಮ್ ಯೋಜನೆ ಅಡಿಯಲ್ಲಿ ಅನುಷ್ಠಾನ, ಸರ್ಕಾರಿ ಕಟ್ಟಡಗಳ ಮೇಲೆ ಸೌರಶಕ್ತಿ ಅಳವಡಿಕೆ, ಕುಡಿಯುವ ನೀರು ಮತ್ತು ಬೀದಿ ದೀಪಗಳಿಗೆ ಸೌರಶಕ್ತಿ ಬಳಕೆಗೆ ಸಂಬಂಽಸಿದಂತೆ ಈ ಐದು ಗ್ರಾಮಪಂಚಾಯಿತಿ ಮಟ್ಟದಲ್ಲಿ ಸ್ಪರ್ಧೆ ನಡೆಯಲಿದೆ.

ಈ ಸ್ಪರ್ಧೆಯು ಪ್ರಸಕ್ತ ವರ್ಷದ ಡಿ. ೩೧ರವರೆಗೆ ನಡೆಯಲಿದ್ದು ಸ್ಪರ್ಧೆಯ ಅಂತ್ಯದಲ್ಲಿ ಮೌಲ್ಯಮಾಪನದ ಆಧಾರದ ಮೇಲೆ ಗರಿಷ್ಠ ನವೀಕರಿಸಬಹುದಾದ ಇಂಧನ ಬಳಸಿದ ಗ್ರಾಮವನ್ನು ಮಾದರಿ ಸೌರ ಗ್ರಾಮವೆಂದು ಘೋಷಿಸಲಾಗುತ್ತದೆ. ಆಯ್ಕೆಯಾದ ಗ್ರಾಮಕ್ಕೆ ನವೀಕರಿಸಬಹುದಾದ ಇಂಧನ ಸಚಿವಾಲಯದ ವತಿಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಜಿಲ್ಲಾಽಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

2 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

3 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

3 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

4 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

5 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

5 hours ago