ಚಾಮರಾಜನಗರ: ರಾಜ್ಯದಲ್ಲಿ ಈ ವರ್ಷದ ಜನವರಿಯಿಂದ ಇದುವರೆಗೆ 59 ಆನೆಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಇವುಗಳಲ್ಲಿ 50 ಆನೆಗಳು ಸಹಜವಾಗಿ ಸಾವನ್ನಪ್ಪಿದ್ದು, 9 ಆನೆಗಳು ಅಸ್ವಾಭಾವಿಕ ಕಾರಣಗಳಿಂದ ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಅದರಲ್ಲೂ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಈ ವರ್ಷ ಆನೆಗಳ ಸಾವಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದರ ಜೊತೆಗೆ ಕೊಡಗಿನಲ್ಲಿ 22, ಮೈಸೂರು ಜಿಲ್ಲೆಯಲ್ಲಿ 4, ಚಿಕ್ಕಮಗಳೂರು ಜಿಲ್ಲೆಯಲ್ಲಿ 5, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಜಿಲ್ಲೆಯಲ್ಲಿ ತಲಾ ಒಂದು ಆನೆ ಮೃತಪಟ್ಟಿದೆ.
ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲೇ ಅತಿ ಹೆಚ್ಚು ಆನೆಗಳು ವಾಸ ಮಾಡುತ್ತಿವೆ. ಈ ಸಾಲಿನ ಗಣತಿ ಪ್ರಕಾರ ರಾಜ್ಯದ ಎಲ್ಲಾ ಅರಣ್ಯಗಳಲ್ಲಿ ಒಟ್ಟು 6395 ಆನೆಗಳಿದ್ದು, ಇವುಗಳ ಪೈಕಿ 2877 ಆನೆಗಳು ಚಾಮರಾಜನಗರ ಜಿಲ್ಲೆಯ ಅರಣ್ಯಗಳಲ್ಲಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…