ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಜರುಗಿದೆ.
ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಆರ್ ಎಂಬುವರಿಗೆ ಸೇರಿದ ಆರು ಹಸುಗಳು ಮೇಲ್ನೋಟಕ್ಕೆ ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಘಟನೆ ವಿವರ: ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದ ನಿವಾಸಿ ಪರಶಿವಮೂರ್ತಿ ಎಂಬುವವರು ತಮ್ಮ ಜಮೀನಿನಲ್ಲಿ ಆರು ಹಸುಗಳನ್ನು ಮೇವು ಮೇಯಲು ಬಿಟ್ಟಿದ್ದರು. ಆದರೆ ಏಕಾಏಕಿ ಆರು ಹಸುಗಳು ಸ್ಥಳದಲ್ಲಿಯೇ ಮೃತಪಟ್ಟಿವೆ.
ಹಸುಗಳ ಮಾಲೀಕ ಪರಶಿವಮೂರ್ತಿ ಮಾತನಾಡಿ, ನಮ್ಮ ಜಮೀನಿನಲ್ಲಿ ಆರು ಹಸುಗಳನ್ನು ಮೇವು ಮೇಯಲು ಬಿಟ್ಟಿದ್ದೆವು. ಆದರೆ ಏಕಾಏಕಿ ಹಸುಗಳು ಮೃತಪಟ್ಟಿವೆ. ಮೇಲ್ನೋಟಕ್ಕೆ ಯಾರೋ ಕಿಡಿಗೇಡಿಗಳು ವಿಷ ಹಾಕಿ ಕೊಂದಿದ್ದಾರೆ. ಹಸುಗಳ ಬಾಯಲ್ಲಿ ನೊರೆ ತುಂಬಿಕೊಂಡು ಹೊಟ್ಟೆ ಊದಿ ಕೊಂಡಿದೆ. ತಪ್ಪಿತಸ್ಥ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಪರಿಹಾರ ಕೊಡುವಂತೆ ಮನವಿ ಮಾಡಿದ್ದಾರೆ.
ಶಾಸಕರಿಂದ ಸ್ಪಂದನೆ: ಶೆಟ್ಟಳ್ಳಿ ಗ್ರಾಮದ ಪರಶಿವಮೂರ್ತಿ ಎಂಬುವವರಿಗೆ ಸೇರಿದ ಆರು ಹಸುಗಳು ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಶಾಸಕ ಎಂ ಆರ್ ಮಂಜುನಾಥ್ ಪಶು ವೈದ್ಯಾಧಿಕಾರಿ ಡಾ. ಸಿದ್ದರಾಜುರವರಿಗೆ ದೂರವಾಣಿ ಕರೆ ಮುಖಾಂತರ ಮಾತನಾಡಿ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ವರದಿ ನೀಡಬೇಕು. ಒಟ್ಟಾರೆ ಹಸುಗಳ ಸಾವಿಗೆ ಕಾರಣವಾಗಿರುವುದನ್ನು ಪತ್ತೆ ಹಚ್ಚಬೇಕು ಎಂದು ಸೂಚನೆ ನೀಡಿದ್ದಾರೆ. ಇದಲ್ಲದೆ ರೈತನಿಗೆ ಧೈರ್ಯ ತುಂಬಿ ಕ್ಷಣಾರ್ಧದಲ್ಲಿಯೇ ಸ್ಪಂದಿಸಿ ಮಾನವೀಯತೆ ಮೆರೆದಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…