Low BP
ಗುಂಡ್ಲುಪೇಟೆ: ಲೋ ಬಿಪಿಯಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ.
ಮಹೇಶ್ ಹಾಗೂ ಸುಮಾ ದಂಪತಿಯ ಪುತ್ರ ಆರ್ಯ ಎಂಬಾತನೇ ಲೋ ಬಿಪಿಯಿಂದ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ಆರ್ಯ ಸೋಮವಾರ ತೀವ್ರ ಜ್ವರ ಕಾಣಿಸಿಕೊಂಡಿತ್ತು.
ಈ ವೇಳೆ ಪೋಷಕರು ಆರ್ಯನನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದರು. ಪರೀಕ್ಷಿಸಿದ ವೈದ್ಯರು ಬಿಪಿ ತುಂಬಾ ಕಡಿಮೆಯಾಗಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸೂಚನೆ ನೀಡಿದ್ದಾರೆ.
ಕೂಡಲೇ ಪೋಷಕರು ಆರ್ಯನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಆರ್ಯ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾನೆ. ಆರ್ಯನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…