ಚಾಮರಾಜನಗರ

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ಗೆ ಚಾಮರಾಜನಗರ ಜಿಲ್ಲೆಯ ಕೃಷಿಕ ದಂಪತಿಗೆ ಆಹ್ವಾನ

ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್‌ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ಹಾಗೂ ಅವರ ಪತ್ನಿ ಕೆ.ಎಸ್.ಗಿರಿಕನ್ಯೆ ಅವರು ದೆಹಲಿಯ ಕರ್ತವ್ಯಪಥದಲ್ಲಿ ಆಯೋಜಿಸಲಾಗಿರುವ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕೇಂದ್ರ ಸರ್ಕಾರ ನಡೆಸುತ್ತಿರುವ ವಿವಿಧ ಕೃಷಿ ಮತ್ತು ರೈತ ಕಲ್ಯಾಣ ಯೋಜನೆ ಲಾಭ ಪಡೆಯುತ್ತಿರುವ ರೈತರನ್ನು ಈ ವಿಶೇಷ ಕಾರ್ಯಕ್ರಮಕ್ಕೆ ಆಹ್ವಾನಿಸಿರುವುದು ವಿಶೇಷವೆನಿಸಿದೆ.

ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಹಾಗೂ ಅವರ ಪತ್ನಿಯನ್ನು ವಿಮಾನದ ಮೂಲಕ ನವದೆಹಲಿಗೆ ಕರೆದುಕೊಂಡು ಹೋಗಲಾಗುತ್ತದೆ.

ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯವು ಈ ಕೃಷಿಕ ದಂಪತಿಯನ್ನು ಆಹ್ವಾನಿಸಿದೆ. ರಾಜ್ಯದಿಂದ ಆಯ್ಕೆಯಾಗಿರುವ ಈ ಕೃಷಿಕ ದಂಪತಿ ಜನವರಿ.25ರಂದು ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದು, ಜನವರಿ.28ರಂದು ರಾಜ್ಯಕ್ಕೆ ವಾಪಸ್‌ ಆಗಲಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

4 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

6 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago