ಚಾಮರಾಜನಗರ

ರಸ್ತೆಯಲ್ಲಿ ಕುಂಟುತ್ತಾ ಸಾಗಿದ ಕಾಡೆಮ್ಮೆ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌

ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಕಾಡೆಮ್ಮೆಯೊಂದು ಗಾಯಗೊಂಡು ಪಾಲಾರ್ ರಸ್ತೆಯಲ್ಲಿ ಕುಂಟುತ್ತಾ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಪಾಲಾರ್ ಚೆಕ್ ಪೋಸ್ಟ್ ಸಮೀಪದ ಸೇತುವೆಯ ಬಳಿ ಬೃಹತ್ ಗಾತ್ರದ ಕಾಡೆಮ್ಮೆಯ ಬಲಗಾಲು ಗಾಯಗೊಂಡು ಕುಂಟುತ್ತಾ ರಸ್ತೆ ದಾಟುತ್ತಿದೆ. ಇದನ್ನು ವಾಹನ ಸವಾರರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ . ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡಿರುವ ಕಾಡೆಮ್ಮೆಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ವನ್ಯ ಪ್ರಿಯರು ಮನವಿ ಮಾಡಿದ್ದಾರೆ.

ಪಾದಯಾತ್ರೆ ಸ್ಥಳದಲ್ಲಿ ಕಾಡಾನೆ ಪ್ರತ್ಯಕ್ಷ: ಮಲೆ ಮಹದೇಶ್ವರ ಬೆಟ್ಟದ ತಪ್ಪಲು ತಾಳುಬೆಟ್ಟದಿಂದ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಪಾದಯಾತ್ರಿಕರ ಮಾರ್ಗದಲ್ಲಿ( ರಂಗಸ್ವಾಮಿ ಒಡ್ಡು) ಪ್ರತ್ಯಕ್ಷವಾಗಿದ್ದು ಈ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುವ ಭಕ್ತಾದಿಗಳು ಅರಣ್ಯ ಮಾರ್ಗ ಮಧ್ಯದಲ್ಲಿ ತೆರಳುವಾಗ ಎಚ್ಚರಿಕೆಯಿಂದ ತೆರಳಬೇಕಿದೆ.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago