ಚಾಮರಾಜನಗರ

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ ಸಂಜೆ 4 ಕಾಡಾನೆಗಳು ನೀರು ಕುಡಿಯಲು ಎಂದಿನಂತೆ ಬಂದಿದ್ದವು. ಈ ಪೈಕಿ 3 ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು.

ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಡುತೊರೆ ಹಳ್ಳ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದೊಂದಿಗೆ ಮೂರು ಆನೆಗಳನ್ನು ರಕ್ಷಣೆ ಮಾಡಲಾಗಿತ್ತು. ಎರಡು ಆನೆಗಳು ಚೇತರಿಸಿಕೊಂಡು ಕಾಡಿನತ್ತ ತೆರಳಿದ್ದವು.

ಇನ್ನೊಂದು ಹೆಣ್ಣಾನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶುವೈದ್ಯಾಧಿಕಾರಿ ಡಾ. ರಮೇಶ್ ರವರು ನಿರಂತರವಾಗಿ ಚಿಕಿತ್ಸೆ ಕೊಡುತ್ತಿದ್ದರು. ಜೊತೆಗೆ ಸಾಕಾನೆ ಮಹೇಂದ್ರನನ್ನು ಬಿಟ್ಟು ಅಸ್ವಸ್ಥಗೊಂಡಿರುವ ಆನೆಯನ್ನು ಮೇಲೆಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನಿಲ್ಲದ ಪ್ರಯತ್ನ ಮಾಡಿದರು. ಆನೆಗೆ ಇಷ್ಟವಾದ ಕಬ್ಬು ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರ ಮೇವುಗಳನ್ನು ಸ್ಥಳದಲ್ಲಿ ಇಡಲಾಗಿದ್ದರೂ ಆನೆ ಮಾತ್ರ ಮೇಲೆಳದೇ ಮೃತಪಟ್ಟಿದೆ.

ನಿರಂತರ ಚಿಕಿತ್ಸೆ: ಕಳೆದ ಮೂರು ದಿನಗಳಿಂದಲೂ ಸಹ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶು ವೈದ್ಯಾಧಿಕಾರಿ ಡಾ. ರಮೇಶ್ ನೇತೃತ್ವದಲ್ಲಿ ನಿತ್ರಾಣಗೊಂಡಿದ್ದ ಕಾಡಾನೆಗೆ ಸಾಕಷ್ಟು ಔಷಧೋಪಚಾರಗಳು ನಡೆಯುತ್ತಿತ್ತು. ಮೂರು ದಿನಗಳಿಂದ ನಿರಂತರವಾಗಿ ಚಿಕಿತ್ಸೆಯನ್ನ ನೀಡಲಾಗುತ್ತಿತ್ತು. ಸ್ಥಳದಲ್ಲಿಯೇ ಆನೆಗೆ ಬೇಕಾದಂತಹ ಪೌಷ್ಟಿಕ ಆಹಾರ ಸಹಿತವಾಗಿ ವೈದ್ಯಾಧಿಕಾರಿಗಳು ಕೂಡ ಅಲ್ಲೇ ಮೊಕ್ಕಂ ಹೂಡಿದ್ದರು. ಆದರೆ ಕೊನೆಗೂ ಚಿಕಿತ್ಸೆ ಫಲಿಸದೆ ಆನೆ ಕೊನೆಯುಸಿರಳೆದಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

6 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

10 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

10 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

11 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

15 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

15 hours ago