ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ ಸಂಜೆ 4 ಕಾಡಾನೆಗಳು ನೀರು ಕುಡಿಯಲು ಎಂದಿನಂತೆ ಬಂದಿದ್ದವು. ಈ ಪೈಕಿ 3 ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು.
ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಡುತೊರೆ ಹಳ್ಳ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದೊಂದಿಗೆ ಮೂರು ಆನೆಗಳನ್ನು ರಕ್ಷಣೆ ಮಾಡಲಾಗಿತ್ತು. ಎರಡು ಆನೆಗಳು ಚೇತರಿಸಿಕೊಂಡು ಕಾಡಿನತ್ತ ತೆರಳಿದ್ದವು.
ಇನ್ನೊಂದು ಹೆಣ್ಣಾನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶುವೈದ್ಯಾಧಿಕಾರಿ ಡಾ. ರಮೇಶ್ ರವರು ನಿರಂತರವಾಗಿ ಚಿಕಿತ್ಸೆ ಕೊಡುತ್ತಿದ್ದರು. ಜೊತೆಗೆ ಸಾಕಾನೆ ಮಹೇಂದ್ರನನ್ನು ಬಿಟ್ಟು ಅಸ್ವಸ್ಥಗೊಂಡಿರುವ ಆನೆಯನ್ನು ಮೇಲೆಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನಿಲ್ಲದ ಪ್ರಯತ್ನ ಮಾಡಿದರು. ಆನೆಗೆ ಇಷ್ಟವಾದ ಕಬ್ಬು ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರ ಮೇವುಗಳನ್ನು ಸ್ಥಳದಲ್ಲಿ ಇಡಲಾಗಿದ್ದರೂ ಆನೆ ಮಾತ್ರ ಮೇಲೆಳದೇ ಮೃತಪಟ್ಟಿದೆ.
ನಿರಂತರ ಚಿಕಿತ್ಸೆ: ಕಳೆದ ಮೂರು ದಿನಗಳಿಂದಲೂ ಸಹ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶು ವೈದ್ಯಾಧಿಕಾರಿ ಡಾ. ರಮೇಶ್ ನೇತೃತ್ವದಲ್ಲಿ ನಿತ್ರಾಣಗೊಂಡಿದ್ದ ಕಾಡಾನೆಗೆ ಸಾಕಷ್ಟು ಔಷಧೋಪಚಾರಗಳು ನಡೆಯುತ್ತಿತ್ತು. ಮೂರು ದಿನಗಳಿಂದ ನಿರಂತರವಾಗಿ ಚಿಕಿತ್ಸೆಯನ್ನ ನೀಡಲಾಗುತ್ತಿತ್ತು. ಸ್ಥಳದಲ್ಲಿಯೇ ಆನೆಗೆ ಬೇಕಾದಂತಹ ಪೌಷ್ಟಿಕ ಆಹಾರ ಸಹಿತವಾಗಿ ವೈದ್ಯಾಧಿಕಾರಿಗಳು ಕೂಡ ಅಲ್ಲೇ ಮೊಕ್ಕಂ ಹೂಡಿದ್ದರು. ಆದರೆ ಕೊನೆಗೂ ಚಿಕಿತ್ಸೆ ಫಲಿಸದೆ ಆನೆ ಕೊನೆಯುಸಿರಳೆದಿದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…