ಚಾಮರಾಜನಗರ

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಸಂಜೆ ಕೊನೆಯುಸಿರೆಳೆದಿದೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಅಜ್ಜೀಪುರ ಸಮೀಪದ ಉಡುತೊರೆ ಹಳ್ಳ ಜಲಾಶಯಕ್ಕೆ ಶನಿವಾರ ಸಂಜೆ 4 ಕಾಡಾನೆಗಳು ನೀರು ಕುಡಿಯಲು ಎಂದಿನಂತೆ ಬಂದಿದ್ದವು. ಈ ಪೈಕಿ 3 ಕಾಡಾನೆಗಳು ಕೆಸರಿನಲ್ಲಿ ಸಿಲುಕಿಕೊಂಡಿದ್ದವು.

ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಉಡುತೊರೆ ಹಳ್ಳ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದೊಂದಿಗೆ ಮೂರು ಆನೆಗಳನ್ನು ರಕ್ಷಣೆ ಮಾಡಲಾಗಿತ್ತು. ಎರಡು ಆನೆಗಳು ಚೇತರಿಸಿಕೊಂಡು ಕಾಡಿನತ್ತ ತೆರಳಿದ್ದವು.

ಇನ್ನೊಂದು ಹೆಣ್ಣಾನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶುವೈದ್ಯಾಧಿಕಾರಿ ಡಾ. ರಮೇಶ್ ರವರು ನಿರಂತರವಾಗಿ ಚಿಕಿತ್ಸೆ ಕೊಡುತ್ತಿದ್ದರು. ಜೊತೆಗೆ ಸಾಕಾನೆ ಮಹೇಂದ್ರನನ್ನು ಬಿಟ್ಟು ಅಸ್ವಸ್ಥಗೊಂಡಿರುವ ಆನೆಯನ್ನು ಮೇಲೆಳಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಇನ್ನಿಲ್ಲದ ಪ್ರಯತ್ನ ಮಾಡಿದರು. ಆನೆಗೆ ಇಷ್ಟವಾದ ಕಬ್ಬು ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರ ಮೇವುಗಳನ್ನು ಸ್ಥಳದಲ್ಲಿ ಇಡಲಾಗಿದ್ದರೂ ಆನೆ ಮಾತ್ರ ಮೇಲೆಳದೇ ಮೃತಪಟ್ಟಿದೆ.

ನಿರಂತರ ಚಿಕಿತ್ಸೆ: ಕಳೆದ ಮೂರು ದಿನಗಳಿಂದಲೂ ಸಹ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಪಶು ವೈದ್ಯಾಧಿಕಾರಿ ಡಾ. ರಮೇಶ್ ನೇತೃತ್ವದಲ್ಲಿ ನಿತ್ರಾಣಗೊಂಡಿದ್ದ ಕಾಡಾನೆಗೆ ಸಾಕಷ್ಟು ಔಷಧೋಪಚಾರಗಳು ನಡೆಯುತ್ತಿತ್ತು. ಮೂರು ದಿನಗಳಿಂದ ನಿರಂತರವಾಗಿ ಚಿಕಿತ್ಸೆಯನ್ನ ನೀಡಲಾಗುತ್ತಿತ್ತು. ಸ್ಥಳದಲ್ಲಿಯೇ ಆನೆಗೆ ಬೇಕಾದಂತಹ ಪೌಷ್ಟಿಕ ಆಹಾರ ಸಹಿತವಾಗಿ ವೈದ್ಯಾಧಿಕಾರಿಗಳು ಕೂಡ ಅಲ್ಲೇ ಮೊಕ್ಕಂ ಹೂಡಿದ್ದರು. ಆದರೆ ಕೊನೆಗೂ ಚಿಕಿತ್ಸೆ ಫಲಿಸದೆ ಆನೆ ಕೊನೆಯುಸಿರಳೆದಿದೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

1 hour ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago