ಚಾಮರಾಜನಗರ

ಗ್ರಾಮದಲ್ಲಿ ಹಬ್ಬದ ವಾತಾವರಣ; ಜಾತ್ರೆಗೆ ಸಕಲ ಸಿದ್ಧತೆ

ಗ್ರಾಮದಲ್ಲಿ ಹಬ್ಬದ ವಾತಾವರಣ; ಜಾತ್ರೆಗೆ ಸಕಲ ಸಿದ್ಧತೆ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.14  ರಿಂದ ನ.16  ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ.

ನ.14  ರ ಸೋಮವಾರ ಹಸಗೂಲಿ ಗ್ರಾಮದಿಂದ ಪಾರ್ವತಾಂಬೆ ವಿಗ್ರಹ ಹೊತ್ತು ಮೂಲ ಸ್ಥಳ ಕಸಗಲಪುರಕ್ಕೆ ಗ್ರಾಮಸ್ಥರು ಜನರು ತೆರಳಿ ರಾತ್ರಿಯಿಡೀ ಪೂಜೆ ಸಲ್ಲಿಸಿ, ನಂತರ ಮಂಗಳವಾರ ಗ್ರಾಮಕ್ಕೆ ದೇವಿಯ ವಿಗ್ರಹ ಹೊತ್ತು ತರುತ್ತಾರೆ.

ಮಂಗಳವಾರ ಹಸಗೂಲಿ ಗ್ರಾಮದಲ್ಲಿ ಸೇವಂತಿಗೆ ಹೂವಿನಿಂದ ರಥವನ್ನು ಸಿಂಗಾರಗೊಳಿಸಿ, ಮೂಲ ಸ್ಥಳದಿಂದ ದೇವಿಯ ವಿಗ್ರಹ ತರುತ್ತಾರೆ. ಈ ವೇಳೆ ಬರಗಿಯಿಂದ ದೇಶಿಪುರ, ಆಲತ್ತೂರು, ಶೆಟ್ಟಹಳ್ಳಿ ಗ್ರಾಮಸ್ಥರು ದೇವರಿಗೆ ಪೂಜೆ ಸಲ್ಲಿಸುವರು. ನಂತರ ಗ್ರಾಮದಲ್ಲಿ ತಂದು ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮಧ್ಯಾಹ್ನ 3ಗಂಟೆಯ ನಂತರ ಮೆರವಣಿಗೆ ಹೊರಡುವುದು.

ಸಾವಿರಾರು ಸಂಖ್ಯೆಯಲ್ಲಿ ಜನರು ಹಸಗೂಲಿ ಅಲ್ಲಹಳ್ಳಿ ಪಾರ್ವತಾಂಬೆಯನ್ನು ನೋಡಲು ಅಗಮಿಸುತ್ತಾರೆ. ಹರಕೆ ಹೊತ್ತವರು ಬಾಯಿಬೀಗ, ಹಣ್ಣು, ಕಜ್ಜಾಯ ಎಸೆದು, ಕಷ್ಟ ಪರಿಹರಿಸು ಎಂದು ದೇವಿಯನ್ನು ಬೇಡಿ ಕಣ್ತುಂಬಿಕೊಳ್ಳುವರು.

ಮಂಗಳವಾರ ಮಧ್ಯಾಹ್ನ ಮತ್ತು ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ರಥ ಮೆರವಣಿಗೆ ಹೊರಡಲಿದೆ. ಬುಧವಾರ ಬೆಳಿಗ್ಗೆ ಗ್ರಾಮದಲ್ಲಿ ದೇವಿಯನ್ನು ಕುಳ್ಳಿರಿಸಿದ ರಥ ಸಂಚರಿಸಲಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸುತ್ತಾರೆ.

ಒಟ್ಟಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಸಗೂಲಿ ಪಾರ್ವತಾಂಬೆ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಜಾತ್ರಾ ಸಮಿತಿ ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ನೂತನ ಸ್ವರ್ಣ ಕಲ್ಲಿನ ದೇವಸ್ಥಾನ ನಿರ್ಮಾಣ

ಹಸಗೂಲಿ ಗ್ರಾಮದಲ್ಲಿ ಸುಮಾರು  ಮೂರೂವರೆ ಕೋಟಿ ರೂ. ವೆಚ್ಚದಲ್ಲಿ ಬೃಹತ್ ಸ್ವರ್ಣ ಕಲ್ಲಿನ ದೇವಸ್ಥಾನ ನಿರ್ಮಾಣವಾಗುತ್ತಿದ್ದು, ಗ್ರಾಮದ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿದೆ. ದೇವಸ್ಥಾನದ ಅಭಿವೃದ್ಧಿಗೆ ದಾನಿಗಳು, ಜನರು ಕಾಣಿಕೆಯನ್ನು ನೀಡಿ ದೇಗುಲ ಪೂರ್ಣಗೊಳಿಸಬೇಕೆಂಬುದು ಸಾರ್ವಜನಿಕರ ಆಶಯವಾಗಿದೆ

andolana

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

11 hours ago