ಚಾಮರಾಜನಗರ

ಗ್ರಾಮದಲ್ಲಿ ಹಬ್ಬದ ವಾತಾವರಣ; ಜಾತ್ರೆಗೆ ಸಕಲ ಸಿದ್ಧತೆ

ಗ್ರಾಮದಲ್ಲಿ ಹಬ್ಬದ ವಾತಾವರಣ; ಜಾತ್ರೆಗೆ ಸಕಲ ಸಿದ್ಧತೆ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿರುವ ಹಸಗೂಲಿ ಜಾತ್ರೆ ನ.14  ರಿಂದ ನ.16  ರವರೆಗೆ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ.

ನ.14  ರ ಸೋಮವಾರ ಹಸಗೂಲಿ ಗ್ರಾಮದಿಂದ ಪಾರ್ವತಾಂಬೆ ವಿಗ್ರಹ ಹೊತ್ತು ಮೂಲ ಸ್ಥಳ ಕಸಗಲಪುರಕ್ಕೆ ಗ್ರಾಮಸ್ಥರು ಜನರು ತೆರಳಿ ರಾತ್ರಿಯಿಡೀ ಪೂಜೆ ಸಲ್ಲಿಸಿ, ನಂತರ ಮಂಗಳವಾರ ಗ್ರಾಮಕ್ಕೆ ದೇವಿಯ ವಿಗ್ರಹ ಹೊತ್ತು ತರುತ್ತಾರೆ.

ಮಂಗಳವಾರ ಹಸಗೂಲಿ ಗ್ರಾಮದಲ್ಲಿ ಸೇವಂತಿಗೆ ಹೂವಿನಿಂದ ರಥವನ್ನು ಸಿಂಗಾರಗೊಳಿಸಿ, ಮೂಲ ಸ್ಥಳದಿಂದ ದೇವಿಯ ವಿಗ್ರಹ ತರುತ್ತಾರೆ. ಈ ವೇಳೆ ಬರಗಿಯಿಂದ ದೇಶಿಪುರ, ಆಲತ್ತೂರು, ಶೆಟ್ಟಹಳ್ಳಿ ಗ್ರಾಮಸ್ಥರು ದೇವರಿಗೆ ಪೂಜೆ ಸಲ್ಲಿಸುವರು. ನಂತರ ಗ್ರಾಮದಲ್ಲಿ ತಂದು ರಥದಲ್ಲಿ ಕೂರಿಸಿ ಗ್ರಾಮದಲ್ಲಿ ಮಧ್ಯಾಹ್ನ 3ಗಂಟೆಯ ನಂತರ ಮೆರವಣಿಗೆ ಹೊರಡುವುದು.

ಸಾವಿರಾರು ಸಂಖ್ಯೆಯಲ್ಲಿ ಜನರು ಹಸಗೂಲಿ ಅಲ್ಲಹಳ್ಳಿ ಪಾರ್ವತಾಂಬೆಯನ್ನು ನೋಡಲು ಅಗಮಿಸುತ್ತಾರೆ. ಹರಕೆ ಹೊತ್ತವರು ಬಾಯಿಬೀಗ, ಹಣ್ಣು, ಕಜ್ಜಾಯ ಎಸೆದು, ಕಷ್ಟ ಪರಿಹರಿಸು ಎಂದು ದೇವಿಯನ್ನು ಬೇಡಿ ಕಣ್ತುಂಬಿಕೊಳ್ಳುವರು.

ಮಂಗಳವಾರ ಮಧ್ಯಾಹ್ನ ಮತ್ತು ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ರಥ ಮೆರವಣಿಗೆ ಹೊರಡಲಿದೆ. ಬುಧವಾರ ಬೆಳಿಗ್ಗೆ ಗ್ರಾಮದಲ್ಲಿ ದೇವಿಯನ್ನು ಕುಳ್ಳಿರಿಸಿದ ರಥ ಸಂಚರಿಸಲಿದ್ದು, ಗ್ರಾಮಸ್ಥರು ಪೂಜೆ ಸಲ್ಲಿಸುತ್ತಾರೆ.

ಒಟ್ಟಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಸಗೂಲಿ ಪಾರ್ವತಾಂಬೆ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಜಾತ್ರಾ ಸಮಿತಿ ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ನೂತನ ಸ್ವರ್ಣ ಕಲ್ಲಿನ ದೇವಸ್ಥಾನ ನಿರ್ಮಾಣ

ಹಸಗೂಲಿ ಗ್ರಾಮದಲ್ಲಿ ಸುಮಾರು  ಮೂರೂವರೆ ಕೋಟಿ ರೂ. ವೆಚ್ಚದಲ್ಲಿ ಬೃಹತ್ ಸ್ವರ್ಣ ಕಲ್ಲಿನ ದೇವಸ್ಥಾನ ನಿರ್ಮಾಣವಾಗುತ್ತಿದ್ದು, ಗ್ರಾಮದ ಹೃದಯ ಭಾಗದಲ್ಲಿ ನಿರ್ಮಾಣವಾಗುತ್ತಿದೆ. ದೇವಸ್ಥಾನದ ಅಭಿವೃದ್ಧಿಗೆ ದಾನಿಗಳು, ಜನರು ಕಾಣಿಕೆಯನ್ನು ನೀಡಿ ದೇಗುಲ ಪೂರ್ಣಗೊಳಿಸಬೇಕೆಂಬುದು ಸಾರ್ವಜನಿಕರ ಆಶಯವಾಗಿದೆ

andolana

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

52 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago