ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ವೆಂಕಟೇಶ್ ಅವರು ಪೊಲೀಸರ ತುಕಡಿ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ನಂತರ ಪೊಲೀಸರು ಹಾಗೂ ವಿದ್ಯಾರ್ಥಿಗಳ ಪಥಸಂಚಲನ ನಡೆಯಿತು.
ಇದನ್ನು ಓದಿ; 70ನೇ ಕನ್ನಡ ರಾಜ್ಯೋತ್ಸವ: ಮೈಸೂರಿನ ಓವಲ್ ಮೈದಾನದಲ್ಲಿ ಧ್ವಜಾರೋಹಣ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವೆಂಕಟೇಶ್ ಅವರು, ರಾಷ್ಟ್ರಕವಿ ಕುವೆಂಪು ಅವರ ನುಡಿಗಳಂತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬಂತೆ ಕನ್ನಡ ನಾಡಿನಲ್ಲ ಹುಟ್ಟಿರುವ ನಾವೆಲ್ಲರೂ ಎಲ್ಲೇ ನೆಲೆಸಿದರೂ ನಾಡು-ನುಡಿಯ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಸಿಇಓ ಮೋನಾರೋತ್, ಎಸ್ಪಿ ಡಾ.ಕವಿತಾ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…