ಚಾಮರಾಜನಗರ

ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ.

ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಬಿಡಾರ ಸಾಕ್ಷಿಯಾಗಿದೆ. ಹೆತ್ತ ತಾಯಿಯಿಂದ ಬೇರೆಯಾದ ಮರಿ ಆನೆಗೆ ಕಾವಡಿ ಕುಟುಂಬವೊಂದು ತಂದೆ ತಾಯಿಯಂತೆ ಪೋಷಣೆ ಮಾಡುತ್ತಿದೆ. ಆನೆ ಮರಿ ಹುಟ್ಟಿದ ಏಳೇ ದಿನಕ್ಕೆ ತಾಯಿಯಿಂದ ಬೇರ್ಪಟ್ಟಿದ್ದು ಏಳು ದಿನದ ಮಗುವಿನಿಂದಲೇ ಈ ದಂಪತಿ ಆನೆ ಮರಿಯನ್ನು ಸಾಕುತ್ತಿದ್ದಾರೆ. ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಗೆ ಕಾವಾಡಿ ರಾಜು ಪೋಷಕರಾಗಿದ್ದಾರೆ. ಹೆತ್ತ ಮಗುವಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಅನಾಥ ಹೆಣ್ಣು ಆನೆಗೆ ಈ ದಂಪತಿ ಆಸರೆಯಾಗಿದ್ದಾರೆ.

ಕಾವಾಡಿ ರಾಜು ಮತ್ತು ರಮ್ಯಾ ಎಂಬ ದಂಪತಿ 7 ತಿಂಗಳ ಹೆಣ್ಣು ಆನೆ ವೇದಾಳನ್ನ ಸ್ವಂತ ಮಗುತರ ಸಾಕಿ ಸಲಹುತ್ತಿದ್ದಾರೆ. ಅನಾಥ ಆನೆ ವೇದ ಅರೆಕ್ಷಣವು ರಾಜು ಹಾಗೂ ಆತನ ಪತ್ನಿಯನ್ನ ಬಿಟ್ಟಿರದು. ಎಲ್ಲಿ ಹೋದರೂ ಜೊತೆಗೇ ಹೋಗುತ್ತೆ. ಸದಾ ಸೀರೆಗೆ ಗಂಟಾಕಿಕೊಂಡಂತೆ ಅವರೊಂದಿಗೆಯೇ ಬದುಕುತ್ತಿದೆ. ವೇದ ಹುಟ್ಟಿದ 7 ದಿನಕ್ಕೆ ತಾಯಿಯಿಂದ ದೂರವಾಗಿದೆ. ಆಗಿನಿಂದಲು ಮರಿ ಹೆಣ್ಣಾನೆ ಪಾಲಿಗೆ ಕಾವಾಡಿ ದಂಪತಿಯೇ ತಂದೆ ತಾಯಿ. ವೇದಾಳನ್ನ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕಾವಾಡಿ ರಾಜುರನ್ನ ನೋಡದೆ ಹೋದರೆ ಚಿಕ್ಕ ಮಕ್ಕಳಂತೆ ವೇದ ಗಲಾಟೆ ಮಾಡುತ್ತಾಳೆ. ಪ್ರತಿ ದಿನ 12 ಲೀಟರ್ ಹಾಲು ಕುಡಿಯುವ ವೇದ, ಕಾವಾಡಿ ದಂಪತಿಯ ಮುದ್ದು ಕೂಸಾಗಿದೆ. ದಂಪತಿಗಳ ನಿಸ್ವಾರ್ಥ ಸೇವೆಗೆ ಬಂಡಿಪುರ ಅರಣ್ಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮರಿಯಾನೆ ಪೋಷಣೆಗೆ ಬೇಕಾದ ಆರ್ಥಿಕ ಸಹಾಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.

lokesh

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

36 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

49 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

55 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago