ಚಾಮರಾಜನಗರ

ಅನಾಥ ಆನೆ ಮರಿಗೆ ಪೋಷಕರಾದ ಕಾವಡಿ ದಂಪತಿ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ.

ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಬಿಡಾರ ಸಾಕ್ಷಿಯಾಗಿದೆ. ಹೆತ್ತ ತಾಯಿಯಿಂದ ಬೇರೆಯಾದ ಮರಿ ಆನೆಗೆ ಕಾವಡಿ ಕುಟುಂಬವೊಂದು ತಂದೆ ತಾಯಿಯಂತೆ ಪೋಷಣೆ ಮಾಡುತ್ತಿದೆ. ಆನೆ ಮರಿ ಹುಟ್ಟಿದ ಏಳೇ ದಿನಕ್ಕೆ ತಾಯಿಯಿಂದ ಬೇರ್ಪಟ್ಟಿದ್ದು ಏಳು ದಿನದ ಮಗುವಿನಿಂದಲೇ ಈ ದಂಪತಿ ಆನೆ ಮರಿಯನ್ನು ಸಾಕುತ್ತಿದ್ದಾರೆ. ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಗೆ ಕಾವಾಡಿ ರಾಜು ಪೋಷಕರಾಗಿದ್ದಾರೆ. ಹೆತ್ತ ಮಗುವಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಅನಾಥ ಹೆಣ್ಣು ಆನೆಗೆ ಈ ದಂಪತಿ ಆಸರೆಯಾಗಿದ್ದಾರೆ.

ಕಾವಾಡಿ ರಾಜು ಮತ್ತು ರಮ್ಯಾ ಎಂಬ ದಂಪತಿ 7 ತಿಂಗಳ ಹೆಣ್ಣು ಆನೆ ವೇದಾಳನ್ನ ಸ್ವಂತ ಮಗುತರ ಸಾಕಿ ಸಲಹುತ್ತಿದ್ದಾರೆ. ಅನಾಥ ಆನೆ ವೇದ ಅರೆಕ್ಷಣವು ರಾಜು ಹಾಗೂ ಆತನ ಪತ್ನಿಯನ್ನ ಬಿಟ್ಟಿರದು. ಎಲ್ಲಿ ಹೋದರೂ ಜೊತೆಗೇ ಹೋಗುತ್ತೆ. ಸದಾ ಸೀರೆಗೆ ಗಂಟಾಕಿಕೊಂಡಂತೆ ಅವರೊಂದಿಗೆಯೇ ಬದುಕುತ್ತಿದೆ. ವೇದ ಹುಟ್ಟಿದ 7 ದಿನಕ್ಕೆ ತಾಯಿಯಿಂದ ದೂರವಾಗಿದೆ. ಆಗಿನಿಂದಲು ಮರಿ ಹೆಣ್ಣಾನೆ ಪಾಲಿಗೆ ಕಾವಾಡಿ ದಂಪತಿಯೇ ತಂದೆ ತಾಯಿ. ವೇದಾಳನ್ನ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕಾವಾಡಿ ರಾಜುರನ್ನ ನೋಡದೆ ಹೋದರೆ ಚಿಕ್ಕ ಮಕ್ಕಳಂತೆ ವೇದ ಗಲಾಟೆ ಮಾಡುತ್ತಾಳೆ. ಪ್ರತಿ ದಿನ 12 ಲೀಟರ್ ಹಾಲು ಕುಡಿಯುವ ವೇದ, ಕಾವಾಡಿ ದಂಪತಿಯ ಮುದ್ದು ಕೂಸಾಗಿದೆ. ದಂಪತಿಗಳ ನಿಸ್ವಾರ್ಥ ಸೇವೆಗೆ ಬಂಡಿಪುರ ಅರಣ್ಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮರಿಯಾನೆ ಪೋಷಣೆಗೆ ಬೇಕಾದ ಆರ್ಥಿಕ ಸಹಾಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago