ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ದಿ ಎಲೆಫೆಂಟ್ ವಿಸ್ಪರರ್ಸ್ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ.
ಮೂಕ ಪ್ರಾಣಿ ಹಾಗೂ ಮಾನವನ ಬಾಂಧವ್ಯಕ್ಕೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಬಿಡಾರ ಸಾಕ್ಷಿಯಾಗಿದೆ. ಹೆತ್ತ ತಾಯಿಯಿಂದ ಬೇರೆಯಾದ ಮರಿ ಆನೆಗೆ ಕಾವಡಿ ಕುಟುಂಬವೊಂದು ತಂದೆ ತಾಯಿಯಂತೆ ಪೋಷಣೆ ಮಾಡುತ್ತಿದೆ. ಆನೆ ಮರಿ ಹುಟ್ಟಿದ ಏಳೇ ದಿನಕ್ಕೆ ತಾಯಿಯಿಂದ ಬೇರ್ಪಟ್ಟಿದ್ದು ಏಳು ದಿನದ ಮಗುವಿನಿಂದಲೇ ಈ ದಂಪತಿ ಆನೆ ಮರಿಯನ್ನು ಸಾಕುತ್ತಿದ್ದಾರೆ. ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಗೆ ಕಾವಾಡಿ ರಾಜು ಪೋಷಕರಾಗಿದ್ದಾರೆ. ಹೆತ್ತ ಮಗುವಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಅನಾಥ ಹೆಣ್ಣು ಆನೆಗೆ ಈ ದಂಪತಿ ಆಸರೆಯಾಗಿದ್ದಾರೆ.
ಕಾವಾಡಿ ರಾಜು ಮತ್ತು ರಮ್ಯಾ ಎಂಬ ದಂಪತಿ 7 ತಿಂಗಳ ಹೆಣ್ಣು ಆನೆ ವೇದಾಳನ್ನ ಸ್ವಂತ ಮಗುತರ ಸಾಕಿ ಸಲಹುತ್ತಿದ್ದಾರೆ. ಅನಾಥ ಆನೆ ವೇದ ಅರೆಕ್ಷಣವು ರಾಜು ಹಾಗೂ ಆತನ ಪತ್ನಿಯನ್ನ ಬಿಟ್ಟಿರದು. ಎಲ್ಲಿ ಹೋದರೂ ಜೊತೆಗೇ ಹೋಗುತ್ತೆ. ಸದಾ ಸೀರೆಗೆ ಗಂಟಾಕಿಕೊಂಡಂತೆ ಅವರೊಂದಿಗೆಯೇ ಬದುಕುತ್ತಿದೆ. ವೇದ ಹುಟ್ಟಿದ 7 ದಿನಕ್ಕೆ ತಾಯಿಯಿಂದ ದೂರವಾಗಿದೆ. ಆಗಿನಿಂದಲು ಮರಿ ಹೆಣ್ಣಾನೆ ಪಾಲಿಗೆ ಕಾವಾಡಿ ದಂಪತಿಯೇ ತಂದೆ ತಾಯಿ. ವೇದಾಳನ್ನ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕಾವಾಡಿ ರಾಜುರನ್ನ ನೋಡದೆ ಹೋದರೆ ಚಿಕ್ಕ ಮಕ್ಕಳಂತೆ ವೇದ ಗಲಾಟೆ ಮಾಡುತ್ತಾಳೆ. ಪ್ರತಿ ದಿನ 12 ಲೀಟರ್ ಹಾಲು ಕುಡಿಯುವ ವೇದ, ಕಾವಾಡಿ ದಂಪತಿಯ ಮುದ್ದು ಕೂಸಾಗಿದೆ. ದಂಪತಿಗಳ ನಿಸ್ವಾರ್ಥ ಸೇವೆಗೆ ಬಂಡಿಪುರ ಅರಣ್ಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮರಿಯಾನೆ ಪೋಷಣೆಗೆ ಬೇಕಾದ ಆರ್ಥಿಕ ಸಹಾಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…