Mysore
31
overcast clouds

Social Media

ಬುಧವಾರ, 17 ಜೂನ್ 2026
Light
Dark

ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ

ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.

ಕಳೆದ 18 ದಿನಗಳಿಂದ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆ ಇದೇ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಬೋನಿಗೆ ಬಿದ್ದಿರುವ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿರುವ ಚಿರತೆಯೇ ಅಥವಾ ಬೇರೆಯದ್ದೇ ಎಂಬುದನ್ನು ಅರಣ್ಯ ಇಲಾಖೆ ದೃಢಪಡಿಸಬೇಕಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಬಾಲಕಿ ಮೇಲೆ ಹಾಗೂ ಕಂಚಗಳ್ಳಿ ಗ್ರಾಮದಲ್ಲಿ ರೈತನ ಮೇಲೆ ದಾಳಿ ನಡೆಸಿ ಜನತೆಯ ನಿದ್ದೆಗೆಡಿಸಿತ್ತು. ಅರಣ್ಯ ಇಲಾಖೆ 6 ಬೋನು, 30 ಕ್ಯಾಮರಾ ಅಳವಡಿಸಿ ಸೆರೆ ಕಾರ್ಯಾಚರಣೆ ನಡೆಸಿತ್ತು.

ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಜೂನ್ 26ರಂದು ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಗ್ಗಲಿಗುಂದಿ ಗ್ರಾಮದ ರಾಮು ಹಾಗೂ ಲಲಿತಾ ಎಂಬವರ ಪುತ್ರಿ ಸುಶೀಲಾ ತಮ್ಮ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಾಳಿ ನಡೆಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!