ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಕಳೆದ 18 ದಿನಗಳಿಂದ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆ ಇದೇ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ. ಬೋನಿಗೆ ಬಿದ್ದಿರುವ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿರುವ ಚಿರತೆಯೇ ಅಥವಾ ಬೇರೆಯದ್ದೇ ಎಂಬುದನ್ನು ಅರಣ್ಯ ಇಲಾಖೆ ದೃಢಪಡಿಸಬೇಕಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಬಾಲಕಿ ಮೇಲೆ ಹಾಗೂ ಕಂಚಗಳ್ಳಿ ಗ್ರಾಮದಲ್ಲಿ ರೈತನ ಮೇಲೆ ದಾಳಿ ನಡೆಸಿ ಜನತೆಯ ನಿದ್ದೆಗೆಡಿಸಿತ್ತು. ಅರಣ್ಯ ಇಲಾಖೆ 6 ಬೋನು, 30 ಕ್ಯಾಮರಾ ಅಳವಡಿಸಿ ಸೆರೆ ಕಾರ್ಯಾಚರಣೆ ನಡೆಸಿತ್ತು.
ಚಿರತೆ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದ ಬಾಲಕಿ ಸುಶೀಲ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಜೂನ್ 26ರಂದು ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಗ್ಗಲಿಗುಂದಿ ಗ್ರಾಮದ ರಾಮು ಹಾಗೂ ಲಲಿತಾ ಎಂಬವರ ಪುತ್ರಿ ಸುಶೀಲಾ ತಮ್ಮ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಾಳಿ ನಡೆಸಿತ್ತು.
ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.…
ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.…
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ…
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…