ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ ಪಡುಗೂರು ಗ್ರಾಮದಲ್ಲಿ ನಡೆದಿದೆ.
ಪಡುಗೂರು ಗ್ರಾಮದ ರೈತ ಮಹದೇವಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಯಾಗಿದ್ದು, ಸೆರೆ ಸಿಕ್ಕ ಚಿರತೆ ನಾಲ್ಕು ವರ್ಷ ಪ್ರಾಯದ ಹೆಣ್ಣು ಚಿರತೆಯಾಗಿದೆ
ಕಳೆದ ಹಲವು ದಿನಗಳಿಂದ ಪಡುಗೂರು ಸುತ್ತಮುತ್ತಲಿನ ಸ್ಥಳಗಳಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈತರು ಆತಂಕಕ್ಕೀಡಾಗಿದ್ದರು.
ಸ್ಥಳೀಯರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು, ತುಮಕೂರು ಮಾದರಿಯಲ್ಲಿ ಬೋನಿಟ್ಟು ಕರುವೂಂದನ್ನು ಕಟ್ಟಿಹಾಕಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸದ್ಯ ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ. ಆದರೆ ಗ್ರಾಮಸ್ಥರಲ್ಲಿ ಇನ್ನೂ ಹುಲಿ ಅತಂಕ ಇದ್ದು, ಅರಣ್ಯ ಇಲಾಖೆಯು ಕೂಡಲೇ ಹುಲಿ ಸೆರೆಗೆ ಕ್ರಮವಹಿಸಬೇಕೆಂದು ರೈತ ಮುಖಂಡರು ಹಾಗೂ ಪಡಗೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…