ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿದೆ. ಆನೆ ದಾಳಿಗೆ ಒಳಗಾದ ಯುವಕನ ಬೆನ್ನು ಮೂಳೆ ಪುಡಿ ಪುಡಿಯಾಗಿದ್ದು ಕತ್ತಿನ ಹಿಂಭಾಗಕ್ಕೆ ಭಾರಿ ಹೊಡೆತ ಬಿದ್ದಿದೆ. ತಡರಾತ್ರಿ ಆನೆ ದಾಳಿ ನಡೆದಿದ್ದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮಸ್ಥರು ಬೆಳಿಗ್ಗೆ ನೋಡಿದಾಗ ಆನೆ ದಾಳಿ ನಡೆದ ವಿಷಯ ತಿಳಿದು ಬಂದಿದ್ದು, ರಾತ್ರಿಯಿಡಿ ಯುವಕ ಕಾಡಲ್ಲೇ ನರಳಾಡಿದ್ದ ಎನ್ನಲಾಗಿದೆ. ನಂತರ ಗಾಯಾಳು ನಾಗೇಶ್ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಪಾಸಣೆಯ ನಂತರ ವೈದ್ಯರು ಬಲಗಾಲು ಸ್ವಾದೀನ ತಪ್ಪಿದೆ ಮತ್ತು ಗಾಯಾಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಚಿಕಿತ್ಸಾ ವೆಚ್ಚ ಭರಿಸಲಾಗದೆ ನಾಗೇಶ್ ತಾಯಿ ಕಂಗಾಲಾಗಿದ್ದಾರೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಮೊದಲು ಹಲವು ಬಾರಿ ಕಾಡಿನಲ್ಲಿ ಬೆಂಕಿ ಬಿದ್ದಾಗ ಆರಿಸಲು ಅರಣ್ಯಾಧಿಕಾರಿಗಳು ನಾಗೇಶ್ ಸಹಾಯ ಪಡೆದಿದ್ದರು, ಆದರೂ ಇದೀಗ ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಘಟನಾ ಸ್ಥಳಕ್ಕೂ ಅರಣ್ಯಾಧಿಕಾರಿಗಳ ಕಚೇರಿಗೂ ಕೇವಲ 500 ಮೀಟರ್ ಅಂತರವಿದೆ. ಆದರೂ ಪ್ರಕರಣ ನಡೆದು ಇಷ್ಟು ದಿನವಾದರೂ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ನಿರ್ಲಕ್ಷವಹಿಸಿದ್ದರು ಎಂದು ಸ್ಥಳೀಯರು ದೂರಿದ್ದಾರೆ.
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…
ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…