ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿದೆ. ಆನೆ ದಾಳಿಗೆ ಒಳಗಾದ ಯುವಕನ ಬೆನ್ನು ಮೂಳೆ ಪುಡಿ ಪುಡಿಯಾಗಿದ್ದು ಕತ್ತಿನ ಹಿಂಭಾಗಕ್ಕೆ ಭಾರಿ ಹೊಡೆತ ಬಿದ್ದಿದೆ. ತಡರಾತ್ರಿ ಆನೆ ದಾಳಿ ನಡೆದಿದ್ದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮಸ್ಥರು ಬೆಳಿಗ್ಗೆ ನೋಡಿದಾಗ ಆನೆ ದಾಳಿ ನಡೆದ ವಿಷಯ ತಿಳಿದು ಬಂದಿದ್ದು, ರಾತ್ರಿಯಿಡಿ ಯುವಕ ಕಾಡಲ್ಲೇ ನರಳಾಡಿದ್ದ ಎನ್ನಲಾಗಿದೆ. ನಂತರ ಗಾಯಾಳು ನಾಗೇಶ್ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಪಾಸಣೆಯ ನಂತರ ವೈದ್ಯರು ಬಲಗಾಲು ಸ್ವಾದೀನ ತಪ್ಪಿದೆ ಮತ್ತು ಗಾಯಾಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಚಿಕಿತ್ಸಾ ವೆಚ್ಚ ಭರಿಸಲಾಗದೆ ನಾಗೇಶ್ ತಾಯಿ ಕಂಗಾಲಾಗಿದ್ದಾರೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಮೊದಲು ಹಲವು ಬಾರಿ ಕಾಡಿನಲ್ಲಿ ಬೆಂಕಿ ಬಿದ್ದಾಗ ಆರಿಸಲು ಅರಣ್ಯಾಧಿಕಾರಿಗಳು ನಾಗೇಶ್ ಸಹಾಯ ಪಡೆದಿದ್ದರು, ಆದರೂ ಇದೀಗ ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಘಟನಾ ಸ್ಥಳಕ್ಕೂ ಅರಣ್ಯಾಧಿಕಾರಿಗಳ ಕಚೇರಿಗೂ ಕೇವಲ 500 ಮೀಟರ್ ಅಂತರವಿದೆ. ಆದರೂ ಪ್ರಕರಣ ನಡೆದು ಇಷ್ಟು ದಿನವಾದರೂ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ನಿರ್ಲಕ್ಷವಹಿಸಿದ್ದರು ಎಂದು ಸ್ಥಳೀಯರು ದೂರಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…