ಚಾಮರಾಜನಗರ

ಯುವಕನ ಮೇಲೆ ಒಂಟಿ ಸಲಗ ದಾಳಿ : ಬೆನ್ನು ಮೂಳೆ ಪುಡಿ ಪುಡಿ

ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿದೆ. ಆನೆ ದಾಳಿಗೆ ಒಳಗಾದ ಯುವಕನ ಬೆನ್ನು ಮೂಳೆ ಪುಡಿ ಪುಡಿಯಾಗಿದ್ದು ಕತ್ತಿನ ಹಿಂಭಾಗಕ್ಕೆ ಭಾರಿ ಹೊಡೆತ ಬಿದ್ದಿದೆ. ತಡರಾತ್ರಿ ಆನೆ ದಾಳಿ ನಡೆದಿದ್ದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮಸ್ಥರು ಬೆಳಿಗ್ಗೆ ನೋಡಿದಾಗ ಆನೆ ದಾಳಿ ನಡೆದ ವಿಷಯ ತಿಳಿದು ಬಂದಿದ್ದು, ರಾತ್ರಿಯಿಡಿ ಯುವಕ ಕಾಡಲ್ಲೇ ನರಳಾಡಿದ್ದ ಎನ್ನಲಾಗಿದೆ. ನಂತರ ಗಾಯಾಳು ನಾಗೇಶ್​ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಪಾಸಣೆಯ ನಂತರ ವೈದ್ಯರು ಬಲಗಾಲು ಸ್ವಾದೀನ ತಪ್ಪಿದೆ ಮತ್ತು ಗಾಯಾಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸಾ ವೆಚ್ಚ ಭರಿಸಲಾಗದೆ ನಾಗೇಶ್ ತಾಯಿ ಕಂಗಾಲಾಗಿದ್ದಾರೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಮೊದಲು ಹಲವು ಬಾರಿ ಕಾಡಿನಲ್ಲಿ ಬೆಂಕಿ ಬಿದ್ದಾಗ ಆರಿಸಲು ಅರಣ್ಯಾಧಿಕಾರಿಗಳು ನಾಗೇಶ್ ಸಹಾಯ ಪಡೆದಿದ್ದರು, ಆದರೂ ಇದೀಗ ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಘಟನಾ ಸ್ಥಳಕ್ಕೂ ಅರಣ್ಯಾಧಿಕಾರಿಗಳ ಕಚೇರಿಗೂ ಕೇವಲ 500 ಮೀಟರ್ ಅಂತರವಿದೆ. ಆದರೂ ಪ್ರಕರಣ ನಡೆದು ಇಷ್ಟು ದಿನವಾದರೂ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ನಿರ್ಲಕ್ಷವಹಿಸಿದ್ದರು ಎಂದು ಸ್ಥಳೀಯರು ದೂರಿದ್ದಾರೆ.

lokesh

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

4 hours ago