ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು.
ಅಮಾವಾಸ್ಯೆ ಪ್ರಯುಕ್ತ ಇಂದು ಮುಂಜಾನೆಯಿಂದಲೇ ಮಲೆ ಮಹದೇಶ್ವರ ಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾಮೃತ ಅಭಿಷೇಕ ಪೂಜೆ ನೆರವೇರಿದವು. ನೈವೇದ್ಯ ಅರ್ಪಿಸಿದ ಬಳಿಕ ಮಹಾ ಮಂಗಳಾರತಿ ಮಾಡಲಾಯಿತು.
ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಮಹದೇಶ್ವರನ ದರ್ಶನ ಪಡೆದರು. ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇವೆಗಳನ್ನು ಮಾಡುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅತಿಥಿ ಗಣ್ಯರಿಗೆ ಗೇಟ್ ನಂಬರ್ 4, 5ರಲ್ಲಿ ನೇರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಜನರಿಗೆ ಶ್ರೀ ಮಲೆ ಮಹದೇಶ್ವರ ಸಾಮಿ ಕ್ಷೇತ್ರ ಅಭಿವೃದ್ಧಿ ಪಾಧಿಕಾರದ ವತಿಯಿಂದ ಕುಡಿಯುವ ನೀರು, ದಾಸೋಹ, ನೆರಳಿನ ವ್ಯವಸ್ಥೆ, ವಿಶೇಷ ದಾಸೋಹ, ಅಮಾವಾಸ್ಯೆ ಪ್ರಯುಕ್ತ ಗರ್ಭಗುಡಿಯಲ್ಲಿ ಶ್ರೀ ಸ್ವಾಮಿಗೆ ವಿವಿಧ ಫಲಪಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.
ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಬೆಟ್ಟಕ್ಕೆ ಬರುವ ಭಕ್ತಾದಿಗಳು ಹಾಗೂ ಉರುಳು ಸೇವೆ ಮಾಡುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದೇಗುಲದ ಹೊರ ಆವರಣದಲ್ಲಿ ಆಗಾಗ್ಗೆ ಟ್ಯಾಂಕರ್ ಮೂಲಕ ನೀರು ಸಿಂಪಡಣೆ ಮಾಡಲಾಗುತ್ತಿತ್ತು.
ಬೇಸಿಗೆ ರಜೆ ಮುಗಿದು ಶಾಲೆಗಳ ಪ್ರಾರಂಭವಾಗಲು ಕೆಲವೇ ಕೆಲವು ದಿನಗಳು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರಿಂದ ವಾಹನ ದಟ್ಟಣೆ ಉಂಟಾಯಿತು.
ರಂಗಮಂದಿರದಲ್ಲಿ ವಾಸ್ತವ್ಯ : ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಶುಕ್ರವಾರ ಎಣ್ಣೆ ಮಜ್ಜನ ಸೇವೆ ಮುಗಿಸಿ ರಂಗಮಂದಿರದಲ್ಲಿ ವಾಸ್ತವ್ಯ ಹೂಡಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಾದ ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ತುಮಕೂರು, ರಾಮನಗರ, ನಂಜನಗೂಡು, ಕನಕಪುರ ತಾಲೂಕುಗಳಿಂದ ಹೆಚ್ಚಿನ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ವಿವಿಧ ಸೇವೆಗಳಲ್ಲಿ ಪಾಲ್ಗೊಂಡಿದ್ದರು.
ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಿಂದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ತಿರುಪತಿ ಮಾದರಿಯ ಕ್ಯೂ ಲೈನ್ ಉದ್ಘಾಟನೆಯಾದ ನಂತರ ಭಕ್ತಾದಿಗಳಿಗೆ ಇನ್ನು ಹೆಚ್ಚಿನ ಅನುಕೂಲ ಸಿಗಲಿದೆ ಎಂದು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ.ಈ.ರಘು ತಿಳಿಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…