ಚಾಮರಾಜನಗರ

ಸಿಎಂಎಸ್ ಹಾಸ್ಟಲ್ ನಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿನಿ ಸಾವು

ಗುಂಡ್ಲುಪೇಟೆ : ಪಟ್ಟಣದ ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್( ವಸತಿ ನಿಲಯ) ನಲ್ಲಿದ್ದ ವಿದ್ಯಾರ್ಥಿನಿ ಪೆಲೀಸಾ( 16) ಹಾಸ್ಟಲ್ ನಲ್ಲಿ ವ್ಯಾಯಾಮ ಪ್ರೇಯರ್ ಮುಗಿಸಿ ನಂತರ ಕೊಠಡಿಗೆ ತೆರಳುವಾಗ ಕುಸಿದುಬಿದ್ದಿದ್ದು ಅಕೆಯನ್ನು ಸಮೀಪದ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನ ನಿವಾಸಿ. ತಾಯಿ ಅನಿತಾ ತಂದೆ ಪ್ರಭು ಇವರ ನಾಲ್ಕನೇ ಮಗಳಾಗಿದ್ದು ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ವಿದ್ಯಾಬಾಸ ಮಾಡುತಿದ್ದು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತಿದ್ದಳು, ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್ ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತಿದ್ದಳು ಬುಧವಾರ ಬೆಳಿಗ್ಗೆ 6.30 ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದ್ದು ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದು ಮೃತ ವಿದ್ಯಾರ್ಥಿನಿ ಮರಣೋತ್ತರ ಪರಿಕ್ಷೆ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ನಡೆಸಲಾಯಿತು ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಯಿತು.

ವಿದ್ಯಾರ್ಥಿನಿ ಮೃತವಿಚಾರ ತಿಳಿದು ನಿರ್ಮಲಾ ಕಾನ್ವೆಂಟ್ ಸಾಲೆಗೆ ರಜೆ ಘೋಷಿಸಲಾಗಿತ್ತು, ಬಿಇಓ ರಾಜಶೇಖರ್, ಶಾಲಾ ಶಿಕ್ಷಕರು, ವಸತಿ ಶಾಲೆಯ ಸಿಬ್ಬಂದಿ ಸಂತಾಪ ಸೂಚಿಸಿದರು.

andolanait

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

1 hour ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

1 hour ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

11 hours ago