ಗುಂಡ್ಲುಪೇಟೆ : ಪಟ್ಟಣದ ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್( ವಸತಿ ನಿಲಯ) ನಲ್ಲಿದ್ದ ವಿದ್ಯಾರ್ಥಿನಿ ಪೆಲೀಸಾ( 16) ಹಾಸ್ಟಲ್ ನಲ್ಲಿ ವ್ಯಾಯಾಮ ಪ್ರೇಯರ್ ಮುಗಿಸಿ ನಂತರ ಕೊಠಡಿಗೆ ತೆರಳುವಾಗ ಕುಸಿದುಬಿದ್ದಿದ್ದು ಅಕೆಯನ್ನು ಸಮೀಪದ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿ ಮೂಲತಃ ಬೆಂಗಳೂರಿನ ನಿವಾಸಿ. ತಾಯಿ ಅನಿತಾ ತಂದೆ ಪ್ರಭು ಇವರ ನಾಲ್ಕನೇ ಮಗಳಾಗಿದ್ದು ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ವಿದ್ಯಾಬಾಸ ಮಾಡುತಿದ್ದು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತಿದ್ದಳು, ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್ ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತಿದ್ದಳು ಬುಧವಾರ ಬೆಳಿಗ್ಗೆ 6.30 ರ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದ್ದು ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದು ಮೃತ ವಿದ್ಯಾರ್ಥಿನಿ ಮರಣೋತ್ತರ ಪರಿಕ್ಷೆ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ನಡೆಸಲಾಯಿತು ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಯಿತು.
ವಿದ್ಯಾರ್ಥಿನಿ ಮೃತವಿಚಾರ ತಿಳಿದು ನಿರ್ಮಲಾ ಕಾನ್ವೆಂಟ್ ಸಾಲೆಗೆ ರಜೆ ಘೋಷಿಸಲಾಗಿತ್ತು, ಬಿಇಓ ರಾಜಶೇಖರ್, ಶಾಲಾ ಶಿಕ್ಷಕರು, ವಸತಿ ಶಾಲೆಯ ಸಿಬ್ಬಂದಿ ಸಂತಾಪ ಸೂಚಿಸಿದರು.
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…