ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ ಜನತೆ ಭಯಭೀತರಾಗಿದ್ದಾರೆ.
ಚಾಮರಾಜನಗರ -ನಂಜನಗೂಡು ಮುಖ್ಯರಸ್ತೆಯಲ್ಲಿರುವ ಮಕಾವ್ ಹೋಟೆಲ್ ಹತ್ತಿರದ ಕಾಳನಹುಂಡಿ ರಸ್ತೆಯಲ್ಲಿ ಸಿಗುವ ಕಟ್ಟೇಪುರದಲ್ಲಿ ಹುಲಿ ಇತ್ತೀಚೆಗೆ ಕರುವನ್ನು ಕೊಂದು ತಿಂದಿತ್ತು.
ಚಾ.ನಗರ ಪ್ರವೇಶ ದ್ವಾರದಿಂದ ಸುಮಾರು 5 ಕಿ.ಮೀ ದೂರದ ಕಟ್ಟೇಪುರದಲ್ಲಿ ಚಾಮರಾಜನಗರದ ಎಸ್ಪಿ ಎಸ್ ಸಾಹುಕಾರ್ ಜಿಯಾವುಲ್ಲಾ ಷರೀಫ್ ಅವರ ತೋಟವಿದ್ದು ಅಲ್ಲಿ ಕಟ್ಟಲಾಗಿದ್ದ ಕರುವನ್ನು ಏ.2ರಂದು ತಿಂದಿತ್ತು.
ಅರಣ್ಯ ಇಲಾಖೆ ಡಿಆರ್ಎಫ್ಒ ಸುರೇಶ್, ಫಾರೆಸ್ಟರ್ ಶ್ವೇತಾದ್ರಿ ಇತರರು ಪರಿಶೀಲನೆ ನಡೆಸಿದಾಗ ಮಾರನೇ ದಿನ ಕರುವಿನ ಕಳೇಬರ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹುಲಿಯ ಚಲನವಲನ ತಿಳಿಯಲು ಘಟನಾ ಸ್ಥಳದಲ್ಲಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿತ್ತು. ಸೆರೆಗೆ ಬೋನನ್ನೂ ಇಟ್ಟು ಅದರ ಒಳಗಡೆ ಮೇಕೆ ಮರಿಯನ್ನು ಕಟ್ಟಲಾಗಿದೆ.
ಮೇಕೆ ತಿನ್ನುವ ಆಸೆಯಿಂದ ಬಂದು ಬೋನಿಗೆ ಬೀಳಲೆಂದು ಹೀಗೆ ಮಾಡಲಾಗಿದೆ. ಆದರೆ, ಚಾಲಾಕಿ ಹುಲಿ ಬೋನಿನತ್ತ ಸುಳಿಯದೇ ಅದರ ಹತ್ತಿರದಲ್ಲೇ ಮಂಗಳವಾರ (ಏ.8) ಮತ್ತೆ ನಡೆದು ಹೋಗಿರುವುದು, ಅದರ ಹೆಜ್ಜೆ ಗುರುತುಗಳು ಮೂಡಿರುವುದು ನೋಡಿ ಅಲ್ಲಿನ ತೋಟದ ಮನೆಗಳವರು ಆತಂಕಗೊಂಡಿದ್ದಾರೆ.
ಅರಣ್ಯ ಇಲಾಖೆಯವರು ಹೇಳುವ ಪ್ರಕಾರ ಕಟ್ಟೆ ಪುರದಲ್ಲಿ ಏ.2ರಂದು ಕರುವನ್ನು ಕೊಂದು ತಿಂದಿದ್ಧ ಹುಲಿಯೇ ಏ.6ರ ಭಾನುವಾರ ಅರಕಲವಾಡಿ ಬಳಿಯ ಲಿಂಗಣಾಪುರದಲ್ಲಿಯೂ ರೈತರೊಬ್ಬರ ಕರುವನ್ನು ಕೊಂದು ತಿಂದಿದೆ. ಹುಲಿ ಕರುಗಳ ಮೇಲೆ ದಾಳಿ ಮಾಡಿರುವ ಈ ಎರಡೂ ಗ್ರಾಮಗಳ ನಡುವಿನ ಅಂತರ ದೂರ ಇದೆಯಾದರೂ ಹುಲಿ ಈ ಪ್ರದೇಶವನ್ನು ತನ್ನ ಎಲ್ಲೆಯಾಗಿ ಮಾಡಿಕೊಂಡಿದೆ. ಅದು ಆಗಾಗ್ಗೆ ಸಂಚಾರ ಮಾಡುತ್ತಿರುತ್ತದೆ. ಜನರು ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಅರಣ್ಯ ಇಲಾಖೆಯವರು.
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…