ಚಾಮರಾಜನಗರ: ಕಾಡು ಪ್ರಾಣಿಗಳು ಈ ಭಾಗದಲ್ಲಿ ಊರು ಪ್ರವೇಶಿಸುವುದನ್ನು ಕೇಳಿದ್ದೇವೆ- ಕಂಡಿದ್ದೇವೆ. ಆದರೆ ಹುಲಿಯೊಂದು ಚಾಮರಾಜನಗರ ಜಿಲ್ಲಾ ಕೇಂದ್ರದ ಸನಿಹದಲ್ಲೇ ಮೇಲಿಂದ ಮೇಲೆ ಸುಳಿದಾಡುತ್ತಿದ್ದು ಸಹಜವಾಗಿಯೇ ಇದರಿಂದ ಜನತೆ ಭಯಭೀತರಾಗಿದ್ದಾರೆ.
ಚಾಮರಾಜನಗರ -ನಂಜನಗೂಡು ಮುಖ್ಯರಸ್ತೆಯಲ್ಲಿರುವ ಮಕಾವ್ ಹೋಟೆಲ್ ಹತ್ತಿರದ ಕಾಳನಹುಂಡಿ ರಸ್ತೆಯಲ್ಲಿ ಸಿಗುವ ಕಟ್ಟೇಪುರದಲ್ಲಿ ಹುಲಿ ಇತ್ತೀಚೆಗೆ ಕರುವನ್ನು ಕೊಂದು ತಿಂದಿತ್ತು.
ಚಾ.ನಗರ ಪ್ರವೇಶ ದ್ವಾರದಿಂದ ಸುಮಾರು 5 ಕಿ.ಮೀ ದೂರದ ಕಟ್ಟೇಪುರದಲ್ಲಿ ಚಾಮರಾಜನಗರದ ಎಸ್ಪಿ ಎಸ್ ಸಾಹುಕಾರ್ ಜಿಯಾವುಲ್ಲಾ ಷರೀಫ್ ಅವರ ತೋಟವಿದ್ದು ಅಲ್ಲಿ ಕಟ್ಟಲಾಗಿದ್ದ ಕರುವನ್ನು ಏ.2ರಂದು ತಿಂದಿತ್ತು.
ಅರಣ್ಯ ಇಲಾಖೆ ಡಿಆರ್ಎಫ್ಒ ಸುರೇಶ್, ಫಾರೆಸ್ಟರ್ ಶ್ವೇತಾದ್ರಿ ಇತರರು ಪರಿಶೀಲನೆ ನಡೆಸಿದಾಗ ಮಾರನೇ ದಿನ ಕರುವಿನ ಕಳೇಬರ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹುಲಿಯ ಚಲನವಲನ ತಿಳಿಯಲು ಘಟನಾ ಸ್ಥಳದಲ್ಲಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿತ್ತು. ಸೆರೆಗೆ ಬೋನನ್ನೂ ಇಟ್ಟು ಅದರ ಒಳಗಡೆ ಮೇಕೆ ಮರಿಯನ್ನು ಕಟ್ಟಲಾಗಿದೆ.
ಮೇಕೆ ತಿನ್ನುವ ಆಸೆಯಿಂದ ಬಂದು ಬೋನಿಗೆ ಬೀಳಲೆಂದು ಹೀಗೆ ಮಾಡಲಾಗಿದೆ. ಆದರೆ, ಚಾಲಾಕಿ ಹುಲಿ ಬೋನಿನತ್ತ ಸುಳಿಯದೇ ಅದರ ಹತ್ತಿರದಲ್ಲೇ ಮಂಗಳವಾರ (ಏ.8) ಮತ್ತೆ ನಡೆದು ಹೋಗಿರುವುದು, ಅದರ ಹೆಜ್ಜೆ ಗುರುತುಗಳು ಮೂಡಿರುವುದು ನೋಡಿ ಅಲ್ಲಿನ ತೋಟದ ಮನೆಗಳವರು ಆತಂಕಗೊಂಡಿದ್ದಾರೆ.
ಅರಣ್ಯ ಇಲಾಖೆಯವರು ಹೇಳುವ ಪ್ರಕಾರ ಕಟ್ಟೆ ಪುರದಲ್ಲಿ ಏ.2ರಂದು ಕರುವನ್ನು ಕೊಂದು ತಿಂದಿದ್ಧ ಹುಲಿಯೇ ಏ.6ರ ಭಾನುವಾರ ಅರಕಲವಾಡಿ ಬಳಿಯ ಲಿಂಗಣಾಪುರದಲ್ಲಿಯೂ ರೈತರೊಬ್ಬರ ಕರುವನ್ನು ಕೊಂದು ತಿಂದಿದೆ. ಹುಲಿ ಕರುಗಳ ಮೇಲೆ ದಾಳಿ ಮಾಡಿರುವ ಈ ಎರಡೂ ಗ್ರಾಮಗಳ ನಡುವಿನ ಅಂತರ ದೂರ ಇದೆಯಾದರೂ ಹುಲಿ ಈ ಪ್ರದೇಶವನ್ನು ತನ್ನ ಎಲ್ಲೆಯಾಗಿ ಮಾಡಿಕೊಂಡಿದೆ. ಅದು ಆಗಾಗ್ಗೆ ಸಂಚಾರ ಮಾಡುತ್ತಿರುತ್ತದೆ. ಜನರು ಎಚ್ಚರಿಕೆಯಿಂದ ಇರಬೇಕು ಎನ್ನುತ್ತಾರೆ ಅರಣ್ಯ ಇಲಾಖೆಯವರು.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…