ಸರಗೂರು: ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.
ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ಸಮೀಪದ ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಸರಗೂರಿನಿಂದ ಕಾಡುಬೇಗೂರು-ಕುರ್ಣೆಗಾಲಕ್ಕೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್(ಕೆಎ11ಎ- 0333)ನಲ್ಲಿ 25 ಮಂದಿ ತೆರಳುತ್ತಿದ್ದರು. ಇದರಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ಚಾಲಕ ರವೀಶ್, ಕಂಡಕ್ಟರ್ ಗಣೇಶ್ ಸೇರಿದಂತೆ ಉಳಿದವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆ, ಎಚ್.ಡಿ.ಕೋಟೆ ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ.
ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಗಾಯಗಳನ್ನು ಬಸ್ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಸಿಲಾಗಿದೆ. ಸ್ಥಳಕ್ಕೆ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್ಐ ಅಶೋಕ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…