ಸರಗೂರು: ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.
ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಸ್ಟೇರಿಂಗ್ ತುಂಡಾಗಿ ಸಮೀಪದ ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಸರಗೂರಿನಿಂದ ಕಾಡುಬೇಗೂರು-ಕುರ್ಣೆಗಾಲಕ್ಕೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್(ಕೆಎ11ಎ- 0333)ನಲ್ಲಿ 25 ಮಂದಿ ತೆರಳುತ್ತಿದ್ದರು. ಇದರಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ಚಾಲಕ ರವೀಶ್, ಕಂಡಕ್ಟರ್ ಗಣೇಶ್ ಸೇರಿದಂತೆ ಉಳಿದವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆ, ಎಚ್.ಡಿ.ಕೋಟೆ ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ.
ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಗಾಯಗಳನ್ನು ಬಸ್ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಸಿಲಾಗಿದೆ. ಸ್ಥಳಕ್ಕೆ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್ಐ ಅಶೋಕ್ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…